<p><strong>ರಾಯಚೂರು</strong>: ‘ಭವಿಷ್ಯದಲ್ಲಿ ಭೂಮಿ ಮೈಲ್ಮೈನಲ್ಲಿ ನೀರಿನ ಕೊರತೆಯಾಗಬಹುದು. ಹೀಗಾಗಿ ಅಂತರ್ಜಲ ಲಭ್ಯತೆ, ನೀರಿನ ಸೆಲೆಗಳು ಹಾಗೂ ಗುಣಮಟ್ಟದ ನೀರು ಮರು ಪೂರಣದ ಬಗ್ಗೆ ಆಳವಾಗಿ ಅರಿತುಕೊಳ್ಳಬೇಕಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ. ಹನುಮಂತಪ್ಪ ಅಭಿಪ್ರಾಯಪಟ್ಟರು.<br><br> ಕೇಂದ್ರ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ ಇಲಾಖೆ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಕೇಂದ್ರ, ಬೆಂಗಳೂರಿನ ನೈಋತ್ಯ ಪ್ರದೇಶದ ಅಂತರ್ಜಲ ಮಂಡಳಿ ಆಶ್ರಯದಲ್ಲಿ ಇಲ್ಲಿಯ ಕೃಷಿ ಎಂಜಿನಿಯರಿಂಗ್ ಕಾಲೇಜಿನ ಸಿಲ್ವರ್ ಜುಬಿಲಿ ಸೆಮಿನಾರ್ ಹಾಲ್ನಲ್ಲಿ ಬುಧವಾರ ಏರ್ಪಡಿಸಿದ್ದ ‘ಜಲಚರ ನಕ್ಷೆ, ಅಂತರ್ಜಲ-ಸಂಬಂಧಿತ ಸಮಸ್ಯೆಗಳು ಮತ್ತು ಅಂತರ್ಜಲ ನಿರ್ವಹಣೆ’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂತರ್ಜಲ ಕುಸಿತದಿಂದ ಎದುರಾಗಿರುವ ಸಮಸ್ಯೆಯನ್ನು ನೀಗಿಸಬೇಕಿದೆ. ನೀರಿನ ಸಮರ್ಪಕ ಬಳಕೆ ಕುರಿತು ಅಧ್ಯಯನ ಮಾಡಲು ಕೃಷಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೆಚ್ಚಿನ ಒತ್ತು ಕೊಡುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>‘ಭವಿಷ್ಯದ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಅಧ್ಯಯನ ನಡೆಸಬೇಕು’ ಎಂದರು.<br /><br /> ಮುಖ್ಯ ಅತಿಥಿ ಕೇಂದ್ರ ಅಂತರ್ಜಲ ಮಂಡಳಿ ಪ್ರಾದೇಶಿಕ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ‘ಅಂತರ್ಜಲದ ಲಭ್ಯತೆ ಕುರಿತಂತೆ ಮೂರು ಹಂತದಲ್ಲಿ ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದರು.<br /><br /> ಕಲ್ಯಾಣ ಕರ್ನಾಟಕದ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಅಂತರ್ಜಲ ಲಭ್ಯತೆಯ ಕುರಿತು ಕೃಷಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು. ಅಂತರ್ಜಲ ಲಭ್ಯತೆ, ಗುಣಮಟ್ಟ ಮತ್ತು ನಿರ್ವಹಣೆ ಕುರಿತು ಮಾಹಿತಿ ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು’ ಹೇಳಿದರು.<br /><br /> ಕೃಷಿ ಎಂಜಿನಿಯರಿಂಗ್ ಕಾಲೇಜಿನ ಡೀನ್ ಎಂ.ಎಸ್.ಅಯ್ಯನಗೌಡರ, ಕೇಂದ್ರ ಅಂತರ್ಜಲ ಮಂಡಳಿ ನಿರ್ದೇಶಕ ಡಾ.ಜೆ.ದವಿತುರಾಜ್, ಹಿರಿಯ ಭೂ ವಿಜ್ಞಾನಿ ಅರುಣ.ಡಿ.ಇ, ಜಿ.ಕೃಷ್ಣಮೂರ್ತಿ, ಕೃಷಿ ಎಂಜಿನಿಯರಿಂಗ್ ಕಾಲೆಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಭವಿಷ್ಯದಲ್ಲಿ ಭೂಮಿ ಮೈಲ್ಮೈನಲ್ಲಿ ನೀರಿನ ಕೊರತೆಯಾಗಬಹುದು. ಹೀಗಾಗಿ ಅಂತರ್ಜಲ ಲಭ್ಯತೆ, ನೀರಿನ ಸೆಲೆಗಳು ಹಾಗೂ ಗುಣಮಟ್ಟದ ನೀರು ಮರು ಪೂರಣದ ಬಗ್ಗೆ ಆಳವಾಗಿ ಅರಿತುಕೊಳ್ಳಬೇಕಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ. ಹನುಮಂತಪ್ಪ ಅಭಿಪ್ರಾಯಪಟ್ಟರು.<br><br> ಕೇಂದ್ರ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ ಇಲಾಖೆ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಕೇಂದ್ರ, ಬೆಂಗಳೂರಿನ ನೈಋತ್ಯ ಪ್ರದೇಶದ ಅಂತರ್ಜಲ ಮಂಡಳಿ ಆಶ್ರಯದಲ್ಲಿ ಇಲ್ಲಿಯ ಕೃಷಿ ಎಂಜಿನಿಯರಿಂಗ್ ಕಾಲೇಜಿನ ಸಿಲ್ವರ್ ಜುಬಿಲಿ ಸೆಮಿನಾರ್ ಹಾಲ್ನಲ್ಲಿ ಬುಧವಾರ ಏರ್ಪಡಿಸಿದ್ದ ‘ಜಲಚರ ನಕ್ಷೆ, ಅಂತರ್ಜಲ-ಸಂಬಂಧಿತ ಸಮಸ್ಯೆಗಳು ಮತ್ತು ಅಂತರ್ಜಲ ನಿರ್ವಹಣೆ’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂತರ್ಜಲ ಕುಸಿತದಿಂದ ಎದುರಾಗಿರುವ ಸಮಸ್ಯೆಯನ್ನು ನೀಗಿಸಬೇಕಿದೆ. ನೀರಿನ ಸಮರ್ಪಕ ಬಳಕೆ ಕುರಿತು ಅಧ್ಯಯನ ಮಾಡಲು ಕೃಷಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೆಚ್ಚಿನ ಒತ್ತು ಕೊಡುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>‘ಭವಿಷ್ಯದ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಅಧ್ಯಯನ ನಡೆಸಬೇಕು’ ಎಂದರು.<br /><br /> ಮುಖ್ಯ ಅತಿಥಿ ಕೇಂದ್ರ ಅಂತರ್ಜಲ ಮಂಡಳಿ ಪ್ರಾದೇಶಿಕ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ‘ಅಂತರ್ಜಲದ ಲಭ್ಯತೆ ಕುರಿತಂತೆ ಮೂರು ಹಂತದಲ್ಲಿ ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದರು.<br /><br /> ಕಲ್ಯಾಣ ಕರ್ನಾಟಕದ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಅಂತರ್ಜಲ ಲಭ್ಯತೆಯ ಕುರಿತು ಕೃಷಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು. ಅಂತರ್ಜಲ ಲಭ್ಯತೆ, ಗುಣಮಟ್ಟ ಮತ್ತು ನಿರ್ವಹಣೆ ಕುರಿತು ಮಾಹಿತಿ ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು’ ಹೇಳಿದರು.<br /><br /> ಕೃಷಿ ಎಂಜಿನಿಯರಿಂಗ್ ಕಾಲೇಜಿನ ಡೀನ್ ಎಂ.ಎಸ್.ಅಯ್ಯನಗೌಡರ, ಕೇಂದ್ರ ಅಂತರ್ಜಲ ಮಂಡಳಿ ನಿರ್ದೇಶಕ ಡಾ.ಜೆ.ದವಿತುರಾಜ್, ಹಿರಿಯ ಭೂ ವಿಜ್ಞಾನಿ ಅರುಣ.ಡಿ.ಇ, ಜಿ.ಕೃಷ್ಣಮೂರ್ತಿ, ಕೃಷಿ ಎಂಜಿನಿಯರಿಂಗ್ ಕಾಲೆಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>