<p><strong>ಮಸ್ಕಿ: </strong>ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ (ನರೇಗಾ) ಕೂಲಿ ಕಾರ್ಮಿಕರ ಹಾಜರಾತಿಗೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಎನ್ಎಂಎಂಎಸ್ ತಂತ್ರಾಂಶದಿಂದ ನೈಜ ಕೂಲಿಕಾರರಿಗೆ ಅನುಕೂಲವಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ನರೇಗಾ) ಶಿವಾನಂದರೆಡ್ಡಿ ಹೇಳಿದರು.</p>.<p>ತಾಲೂಕಿನ ಕನ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವ್ಯಾಸನಂದಿಹಾಳ, ಮಾರಲದಿನ್ನಿ ಜಲಾಶಯ, ಅಡವಿಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಗ್ಗನಾಯಕನಭಾವಿ, ಬೆಲ್ಲದಮರಡಿ ಮುಂತಾದ ಗ್ರಾಮಗಳಲ್ಲಿ ಬುಧವಾರ ನರೇಗಾ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.</p>.<p>ಮೇಟಿಗಳು ಕಡ್ಡಾಯವಾಗಿ ತಂತ್ರಾಂಶದಲ್ಲಿ ಕೂಲಿಕಾರರ ಹಾಜರಾತಿ ದಾಖಲಿಸಬೇಕು. ಕಾಮಗಾರಿ ಸ್ಥಳ ಗ್ರಾಮದಿಂದ 5 ಕಿ.ಮೀ. ದೂರ ಇದ್ದರೆ, ಪ್ರಯಾಣ ವೆಚ್ಚ ಭರಿಸಲಾಗುವುದು. ಬಿಸಿಲಿನ ಝಳ ಹೆಚ್ಚುತ್ತಿರುವುದರಿಂದ ನೆರಳು, ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.</p>.<p>ಕೂಲಿ ಮೊತ್ತ ಸಂಪೂರ್ಣ ಪಾವತಿಯಾಗಬೇಕಾದರೆ, ತಾಂತ್ರಿಕ ಸಹಾಯಕರು ನಿಗದಿಪಡಿಸಿದ ಅಳತೆ ಪ್ರಕಾರ ಕೆಲಸ ಪೂರ್ಣಗೊಳಿಸಬೇಕು. ಇಲ್ಲವಾದರೆ, ಕೂಲಿ ಮೊತ್ತ ಕಡಿಮೆಯಾಗುತ್ತದೆ ಎಂದು ತಿಳಿಸಿದರು.</p>.<p>ಕೇಂದ್ರ ಸರ್ಕಾರ ಜಾರಿಗೊಳಿಸಿದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅತ್ಯಂತ ಕಡಿಮೆ ಮೊತ್ತದ ಪಾಲಿಸಿಗಳಾಗಿದ್ದು, ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ತಾಂತ್ರಿಕ ಸಹಾಯಕ ಸೋಮಶೇಖರ್, ವೀರಮ್ಮ, ಶಿವಪುತ್ರಪ್ಪ, ದುರಗೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ (ನರೇಗಾ) ಕೂಲಿ ಕಾರ್ಮಿಕರ ಹಾಜರಾತಿಗೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಎನ್ಎಂಎಂಎಸ್ ತಂತ್ರಾಂಶದಿಂದ ನೈಜ ಕೂಲಿಕಾರರಿಗೆ ಅನುಕೂಲವಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ನರೇಗಾ) ಶಿವಾನಂದರೆಡ್ಡಿ ಹೇಳಿದರು.</p>.<p>ತಾಲೂಕಿನ ಕನ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವ್ಯಾಸನಂದಿಹಾಳ, ಮಾರಲದಿನ್ನಿ ಜಲಾಶಯ, ಅಡವಿಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಗ್ಗನಾಯಕನಭಾವಿ, ಬೆಲ್ಲದಮರಡಿ ಮುಂತಾದ ಗ್ರಾಮಗಳಲ್ಲಿ ಬುಧವಾರ ನರೇಗಾ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.</p>.<p>ಮೇಟಿಗಳು ಕಡ್ಡಾಯವಾಗಿ ತಂತ್ರಾಂಶದಲ್ಲಿ ಕೂಲಿಕಾರರ ಹಾಜರಾತಿ ದಾಖಲಿಸಬೇಕು. ಕಾಮಗಾರಿ ಸ್ಥಳ ಗ್ರಾಮದಿಂದ 5 ಕಿ.ಮೀ. ದೂರ ಇದ್ದರೆ, ಪ್ರಯಾಣ ವೆಚ್ಚ ಭರಿಸಲಾಗುವುದು. ಬಿಸಿಲಿನ ಝಳ ಹೆಚ್ಚುತ್ತಿರುವುದರಿಂದ ನೆರಳು, ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.</p>.<p>ಕೂಲಿ ಮೊತ್ತ ಸಂಪೂರ್ಣ ಪಾವತಿಯಾಗಬೇಕಾದರೆ, ತಾಂತ್ರಿಕ ಸಹಾಯಕರು ನಿಗದಿಪಡಿಸಿದ ಅಳತೆ ಪ್ರಕಾರ ಕೆಲಸ ಪೂರ್ಣಗೊಳಿಸಬೇಕು. ಇಲ್ಲವಾದರೆ, ಕೂಲಿ ಮೊತ್ತ ಕಡಿಮೆಯಾಗುತ್ತದೆ ಎಂದು ತಿಳಿಸಿದರು.</p>.<p>ಕೇಂದ್ರ ಸರ್ಕಾರ ಜಾರಿಗೊಳಿಸಿದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅತ್ಯಂತ ಕಡಿಮೆ ಮೊತ್ತದ ಪಾಲಿಸಿಗಳಾಗಿದ್ದು, ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ತಾಂತ್ರಿಕ ಸಹಾಯಕ ಸೋಮಶೇಖರ್, ವೀರಮ್ಮ, ಶಿವಪುತ್ರಪ್ಪ, ದುರಗೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>