<p><strong>ರಾಯಚೂರು:</strong> ‘ಕೃಷಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ದಿಸೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಕೃಷಿ ಎಂಜಿನಿಯರಿಂಗ್ ನಿರ್ದೇಶನಾಲಯ ಸ್ಥಾಪಿಸಬೇಕು’ ಎಂದು ಭಾರತೀಯ ಅನುಸಂಧಾನ ಪರಿಷತ್ತಿನ ಕೃಷಿ ಎಂಜಿನಿಯರಿಂಗ್ ವಿಭಾಗದ ಉಪ ಮಹಾ ನಿರ್ದೇಶಕ ಡಾ.ಎಸ್.ಎನ್.ಝಾ ಸಲಹೆ ನೀಡಿದರು.</p>.<p>ನಗರದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ದಿಕ್ಸೂಚಿ ಭಾಷಣ ಮಾಡಿದರು.</p>.<p>‘ಪ್ರತಿ ಪಂಚಾಯಿತಿ, ಬ್ಲಾಕ್, ಜಿಲ್ಲೆಗಳಲ್ಲಿ ಎಂಜಿನಿಯರ್ಗಳನ್ನು ನೇಮಿಸಬೇಕು. ಸರಿಯಾದ ಸ್ಥಳಗಳಲ್ಲಿ ಸರಿಯಾದ ಜ್ಞಾನ ಹೊಂದಿರುವ ಸರಿಯಾದ ವ್ಯಕ್ತಿಗಳ ಅಗತ್ಯವಿದೆ. ಈ ದಿಸೆಯಲ್ಲಿ ಎಂಜಿನಿಯರಿಂಗ್ ಪಡೆದವರಿಗೆ ಇನ್ನಷ್ಟು ತರಬೇತಿ ನೀಡಿ ಸಜ್ಜುಗೊಳಿಸಬೇಕಿದೆ’ ಎಂದರು.</p>.<p>‘ನಿರ್ದೇಶನಾಲಯದ ಮೂಲಕ ಕೆಲಸದ ಮೇಲ್ವಿಚಾರಣೆ ನಡೆಸಬೇಕು. ಅಂದಾಗ ಮಾತ್ರ <br> ಉತ್ತಮ ಯೋಜನೆ ರೂಪಿಸಲು ಹಾಗೂ ಯೋಜನೆಯ ಸಮರ್ಪಕ ಅನುಷ್ಠಾನ ಸಾಧ್ಯವಾಗುತ್ತದೆ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸುಧಾರಣೆಯಲ್ಲಿ ಬಹಳ ಮುಂದಿದೆ’ ಎಂದು ಹೇಳಿದರು.</p>.<p>ಕೃಷಿಯಲ್ಲಿ ಪದವಿ ಹಾಗೂ ಎಂಜಿನಿಯರಿಂಗ್ ಪದವಿ ಪಡೆದವರು ಸಕಾರಾತ್ಮಕ ಚಿಂತನೆ ಹಾಗೂ ಕ್ರಿಯೆಯೊಂದಿಗೆ ದೇಶಕ್ಕೆ ಕೊಡುಗೆ ನೀಡಲು ಪ್ರಯತ್ನಿಸಬೇಕು. ಕೃಷಿ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸಾಂಪ್ರದಾಯಿಕ ಕೃಷಿಯಲ್ಲಿ ಯುವಕರ ಆಸಕ್ತಿ ಕಡಿಮೆಯಾಗಿದೆ. ದೇಶದಲ್ಲಿ ಕೃಷಿ ಕಾರ್ಮಿಕರ ಶೇಕಡಾವಾರು ಪ್ರಮಾಣವು 1991ರಲ್ಲಿ ಶೇ 59.1ರಷ್ಟು, 2011ರಲ್ಲಿ ಶೇ 54.6ರಷ್ಟು ಮತ್ತು 2021ರಲ್ಲಿ ಶೇ39.4ಕ್ಕೆ ಇಳಿದಿದೆ. ದನಗಳ ಸಂಖ್ಯೆ 1971-72ರಲ್ಲಿ 78.42 ಮಿಲಿಯನ್ ಇತ್ತು. 2018-19ರಲ್ಲಿ 38.74 ಮಿಲಿಯನ್ಗೆ ಇಳಿಕೆಯಾಗಿದೆ’ ಎಂದು ತಿಳಿಸಿದರು.</p>.<p>‘ಕೃಷಿ ಕಾರ್ಮಿಕರು ಮತ್ತು ಬರದಲ್ಲಿ ನೆರವಾಗುವ ಜಾನುವಾರುಗಳ ಸಂಯೋಜಿತ ಪಾಲು ಹಾಗೂ ಭೂಮಿಯ ಹಿಡುವಳಿ ಕಡಿಮೆಯಾಗಿದೆ. ಇದರಿಂದಾಗಿ ಕೃಷಿಯನ್ನು ಲಾಭದಾಯಕವಾಗಿಸುವಲ್ಲಿ ಮತ್ತಷ್ಟು ಸಮಸ್ಯೆಗಳು ಎದುರಾಗುತ್ತಿವೆ’ ಎಂದು ಹೇಳಿದರು.</p>.<p>‘ಮುಂಬರುವ ವರ್ಷಗಳಲ್ಲಿ ರೊಬೊಟ್ ಮೂಲಕ ತಳಿ ಅಭಿವೃದ್ಧಿ, ವಿವಿಧ ಅಭಿವೃದ್ಧಿ ಮತ್ತು ಗುರುತಿಸುವಿಕೆ ವ್ಯವಸ್ಥೆಯನ್ನು ನಿರೀಕ್ಷಿಸಲಾಗುತ್ತಿದೆ. ಯಾಂತ್ರೀಕರಣ, ಯಾಂತ್ರೀಕೃತಗೊಂಡ ಮತ್ತು ಪರ್ಯಾಯಗಳ ಬಗ್ಗೆ ನೀತಿ ನಿರೂಪಕರು ಆಲೋಚಿಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಕೃಷಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ದಿಸೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಕೃಷಿ ಎಂಜಿನಿಯರಿಂಗ್ ನಿರ್ದೇಶನಾಲಯ ಸ್ಥಾಪಿಸಬೇಕು’ ಎಂದು ಭಾರತೀಯ ಅನುಸಂಧಾನ ಪರಿಷತ್ತಿನ ಕೃಷಿ ಎಂಜಿನಿಯರಿಂಗ್ ವಿಭಾಗದ ಉಪ ಮಹಾ ನಿರ್ದೇಶಕ ಡಾ.ಎಸ್.ಎನ್.ಝಾ ಸಲಹೆ ನೀಡಿದರು.</p>.<p>ನಗರದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ದಿಕ್ಸೂಚಿ ಭಾಷಣ ಮಾಡಿದರು.</p>.<p>‘ಪ್ರತಿ ಪಂಚಾಯಿತಿ, ಬ್ಲಾಕ್, ಜಿಲ್ಲೆಗಳಲ್ಲಿ ಎಂಜಿನಿಯರ್ಗಳನ್ನು ನೇಮಿಸಬೇಕು. ಸರಿಯಾದ ಸ್ಥಳಗಳಲ್ಲಿ ಸರಿಯಾದ ಜ್ಞಾನ ಹೊಂದಿರುವ ಸರಿಯಾದ ವ್ಯಕ್ತಿಗಳ ಅಗತ್ಯವಿದೆ. ಈ ದಿಸೆಯಲ್ಲಿ ಎಂಜಿನಿಯರಿಂಗ್ ಪಡೆದವರಿಗೆ ಇನ್ನಷ್ಟು ತರಬೇತಿ ನೀಡಿ ಸಜ್ಜುಗೊಳಿಸಬೇಕಿದೆ’ ಎಂದರು.</p>.<p>‘ನಿರ್ದೇಶನಾಲಯದ ಮೂಲಕ ಕೆಲಸದ ಮೇಲ್ವಿಚಾರಣೆ ನಡೆಸಬೇಕು. ಅಂದಾಗ ಮಾತ್ರ <br> ಉತ್ತಮ ಯೋಜನೆ ರೂಪಿಸಲು ಹಾಗೂ ಯೋಜನೆಯ ಸಮರ್ಪಕ ಅನುಷ್ಠಾನ ಸಾಧ್ಯವಾಗುತ್ತದೆ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸುಧಾರಣೆಯಲ್ಲಿ ಬಹಳ ಮುಂದಿದೆ’ ಎಂದು ಹೇಳಿದರು.</p>.<p>ಕೃಷಿಯಲ್ಲಿ ಪದವಿ ಹಾಗೂ ಎಂಜಿನಿಯರಿಂಗ್ ಪದವಿ ಪಡೆದವರು ಸಕಾರಾತ್ಮಕ ಚಿಂತನೆ ಹಾಗೂ ಕ್ರಿಯೆಯೊಂದಿಗೆ ದೇಶಕ್ಕೆ ಕೊಡುಗೆ ನೀಡಲು ಪ್ರಯತ್ನಿಸಬೇಕು. ಕೃಷಿ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸಾಂಪ್ರದಾಯಿಕ ಕೃಷಿಯಲ್ಲಿ ಯುವಕರ ಆಸಕ್ತಿ ಕಡಿಮೆಯಾಗಿದೆ. ದೇಶದಲ್ಲಿ ಕೃಷಿ ಕಾರ್ಮಿಕರ ಶೇಕಡಾವಾರು ಪ್ರಮಾಣವು 1991ರಲ್ಲಿ ಶೇ 59.1ರಷ್ಟು, 2011ರಲ್ಲಿ ಶೇ 54.6ರಷ್ಟು ಮತ್ತು 2021ರಲ್ಲಿ ಶೇ39.4ಕ್ಕೆ ಇಳಿದಿದೆ. ದನಗಳ ಸಂಖ್ಯೆ 1971-72ರಲ್ಲಿ 78.42 ಮಿಲಿಯನ್ ಇತ್ತು. 2018-19ರಲ್ಲಿ 38.74 ಮಿಲಿಯನ್ಗೆ ಇಳಿಕೆಯಾಗಿದೆ’ ಎಂದು ತಿಳಿಸಿದರು.</p>.<p>‘ಕೃಷಿ ಕಾರ್ಮಿಕರು ಮತ್ತು ಬರದಲ್ಲಿ ನೆರವಾಗುವ ಜಾನುವಾರುಗಳ ಸಂಯೋಜಿತ ಪಾಲು ಹಾಗೂ ಭೂಮಿಯ ಹಿಡುವಳಿ ಕಡಿಮೆಯಾಗಿದೆ. ಇದರಿಂದಾಗಿ ಕೃಷಿಯನ್ನು ಲಾಭದಾಯಕವಾಗಿಸುವಲ್ಲಿ ಮತ್ತಷ್ಟು ಸಮಸ್ಯೆಗಳು ಎದುರಾಗುತ್ತಿವೆ’ ಎಂದು ಹೇಳಿದರು.</p>.<p>‘ಮುಂಬರುವ ವರ್ಷಗಳಲ್ಲಿ ರೊಬೊಟ್ ಮೂಲಕ ತಳಿ ಅಭಿವೃದ್ಧಿ, ವಿವಿಧ ಅಭಿವೃದ್ಧಿ ಮತ್ತು ಗುರುತಿಸುವಿಕೆ ವ್ಯವಸ್ಥೆಯನ್ನು ನಿರೀಕ್ಷಿಸಲಾಗುತ್ತಿದೆ. ಯಾಂತ್ರೀಕರಣ, ಯಾಂತ್ರೀಕೃತಗೊಂಡ ಮತ್ತು ಪರ್ಯಾಯಗಳ ಬಗ್ಗೆ ನೀತಿ ನಿರೂಪಕರು ಆಲೋಚಿಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>