<p><strong>ರಾಯಚೂರು</strong>: ಇಲ್ಲಿನ ಕೃಷಿ ಮಾರಾಟ ಇಲಾಖೆ 2024-25ನೇ ಸಾಲಿನ ಮಾರುಕಟ್ಟೆ ಮಧ್ಯೆ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ ಯೋಜನೆಯ ಅಡಿಯಲ್ಲಿ ಒಣಮೆಣಸಿನಕಾಯಿ ಖರೀದಿಸಲು ಕೇಂದ್ರಗಳನ್ನು ಸ್ಥಾಪಿಸಲಾಗಿದೆ.</p>.<p>ರೈತರ ನೋಂದಣಿ ಕಾಲಾವಧಿಯನ್ನು 15 ದಿನಗಳವರೆಗೆ ಮಾತ್ರ ನಿಗದಿಪಡಿಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.</p>.<p>ಪ್ರತಿ ಕ್ವಿಂಟಲಿಗೆ ₹10,589 ದರದಂತೆ ಒಣಮೆಣಸಿನಕಾಯಿ ಖರೀದಿಸಲಾಗುವುದು. ಈ ಯೋಜನೆಯ ಅನುಷ್ಠಾನ ಅವಧಿಯು ಯುನಿಫೈಡ್ ಮಾರ್ಕೇಟ್ ಪ್ಲಾಟಪಾರ್ಮ್ನ ತಂತ್ರಾಂಶದಲ್ಲಿ ದಾಖಲಿಸಬೇಕು. ಒಂದು ತಿಂಗಳ ಅವಧಿಯವರೆಗೆ ಮಾತ್ರ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯಡಿ ಪ್ರತಿ ಎಕರೆಗೆ 15 ಕ್ವಿಂಟಾಲ್ ಇಳುವರಿಯಂತೆ ಪ್ರತಿ ರೈತರಿಂದ ಗರಿಷ್ಟ 30 ಕ್ವಿಂಟಲ್ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತ ನೀಡಲಾಗುವುದು.</p>.<p>ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಈ ಯೋಜನೆಯಡಿಯಲ್ಲಿ ಮಾರಾಟ ಮಾಡಲು ಬರುವ ರೈತರ ನೋಂದಣಿ ಕಾರ್ಯವನ್ನು ಎನ್ಇಎಂಎಲ್ ತಂತ್ರಾಂಶದಲ್ಲಿ ಮಾಡಿ ನಂತರ ಒಣಮೆಣಸಿನಕಾಯಿ ಉತ್ಪನ್ನದ ಗೇಟ್ ಎಂಟ್ರಿಯನ್ನು ಯುಎಂಪಿ ತಂತ್ರಾಶದಡಿಯಲ್ಲಿ ದಾಖಲಿಸುವ ಕಾರ್ಯವನ್ನು ಆಯಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕಡ್ಡಾಯವಾಗಿ ನಿರ್ವಹಿಬೇಕು ಎಂದು ತಿಳಿಸಲಾಗಿದೆ.</p>.<p>ರೈತರು ಆಧಾರ್ ಕಾರ್ಡ್, ಪಹಣಿಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿ ಒಣಮೆಣಸಿನಕಾಯಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಇಲ್ಲಿನ ಕೃಷಿ ಮಾರಾಟ ಇಲಾಖೆ 2024-25ನೇ ಸಾಲಿನ ಮಾರುಕಟ್ಟೆ ಮಧ್ಯೆ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ ಯೋಜನೆಯ ಅಡಿಯಲ್ಲಿ ಒಣಮೆಣಸಿನಕಾಯಿ ಖರೀದಿಸಲು ಕೇಂದ್ರಗಳನ್ನು ಸ್ಥಾಪಿಸಲಾಗಿದೆ.</p>.<p>ರೈತರ ನೋಂದಣಿ ಕಾಲಾವಧಿಯನ್ನು 15 ದಿನಗಳವರೆಗೆ ಮಾತ್ರ ನಿಗದಿಪಡಿಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.</p>.<p>ಪ್ರತಿ ಕ್ವಿಂಟಲಿಗೆ ₹10,589 ದರದಂತೆ ಒಣಮೆಣಸಿನಕಾಯಿ ಖರೀದಿಸಲಾಗುವುದು. ಈ ಯೋಜನೆಯ ಅನುಷ್ಠಾನ ಅವಧಿಯು ಯುನಿಫೈಡ್ ಮಾರ್ಕೇಟ್ ಪ್ಲಾಟಪಾರ್ಮ್ನ ತಂತ್ರಾಂಶದಲ್ಲಿ ದಾಖಲಿಸಬೇಕು. ಒಂದು ತಿಂಗಳ ಅವಧಿಯವರೆಗೆ ಮಾತ್ರ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯಡಿ ಪ್ರತಿ ಎಕರೆಗೆ 15 ಕ್ವಿಂಟಾಲ್ ಇಳುವರಿಯಂತೆ ಪ್ರತಿ ರೈತರಿಂದ ಗರಿಷ್ಟ 30 ಕ್ವಿಂಟಲ್ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತ ನೀಡಲಾಗುವುದು.</p>.<p>ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಈ ಯೋಜನೆಯಡಿಯಲ್ಲಿ ಮಾರಾಟ ಮಾಡಲು ಬರುವ ರೈತರ ನೋಂದಣಿ ಕಾರ್ಯವನ್ನು ಎನ್ಇಎಂಎಲ್ ತಂತ್ರಾಂಶದಲ್ಲಿ ಮಾಡಿ ನಂತರ ಒಣಮೆಣಸಿನಕಾಯಿ ಉತ್ಪನ್ನದ ಗೇಟ್ ಎಂಟ್ರಿಯನ್ನು ಯುಎಂಪಿ ತಂತ್ರಾಶದಡಿಯಲ್ಲಿ ದಾಖಲಿಸುವ ಕಾರ್ಯವನ್ನು ಆಯಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕಡ್ಡಾಯವಾಗಿ ನಿರ್ವಹಿಬೇಕು ಎಂದು ತಿಳಿಸಲಾಗಿದೆ.</p>.<p>ರೈತರು ಆಧಾರ್ ಕಾರ್ಡ್, ಪಹಣಿಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿ ಒಣಮೆಣಸಿನಕಾಯಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>