<p><strong>ರಾಯಚೂರು:</strong> ಜನಸಂಖ್ಯಾ ನಿಯಂತ್ರಣದ ಕ್ರಮಗಳನ್ನು ಪ್ರತಿಯೊಬ್ಬರ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಎಂ.ಕೆ.ಎಸ್.ನಸೀರ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಜನಸಂಖ್ಯಾ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ವಿಶ್ವದ ಜನಸಂಖ್ಯೆ 500 ಕೋಟಿಗೆ ತಲುಪಿದಾಗಿನಿಂದ ವಿಶ್ವ ಜನಸಂಖ್ಯಾ ದಿನ ಆಚರಿಸಲು ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುನಿಸೆಫ್ ತೀರ್ಮಾನಿಸಿದೆ. 1987ರ ಜುಲೈ 11ರಂದು ಜನಸಂಖ್ಯಾ ದಿನಾಚರಣೆ ಆರಂಭಿಸಲಾಗಿದೆ. ಜನಸಂಖ್ಯಾ ಹೆಚ್ಚಳದಿಂದಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಸಲು ಪ್ರತಿವರ್ಷ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದರು.</p>.<p>ದೇಶದಲ್ಲಿ ಪ್ರತಿ ನಿಮಿಷಕ್ಕೆ 29 ಮಕ್ಕಳು, ಗಂಟೆಗೆ 1,768, ದಿನಕ್ಕೆ 42,434 ಹಾಗೂ ತಿಂಗಳಿಗೆ 1.55 ಕೋಟಿ ಮಕ್ಕಳು ಜನಿಸುತ್ತಿದ್ದು, ಜನಸಂಖ್ಯಾ ಸ್ಪೋಟ ಹೆಚ್ಚಾಗಿ ಸಮಸ್ಯೆಗಳು ಉದ್ಭವಿಸುತ್ತವೆ. ಆದ್ದರಿಂದ ಜನಸಂಖ್ಯೆ ತಡೆಗಟ್ಟಲು ಇರುವ ಮಾರ್ಗಗಳನ್ನು ಎಲ್ಲರೂ ಅನುಸರಿಸಬೇಕು ಎಂದು ತಿಳಿಸಿದರು.</p>.<p>ಮದುವೆ ಮಾಡಿಕೊಳ್ಳುವ ವರನಿಗೆ 21 ಹಾಗೂ ವಧುವಿಗೆ 18 ವರ್ಷ ತುಂಬಿರಬೇಕು. ಇಬ್ಬರ ನಡುವೆ 4 ವರ್ಷದ ಅಂತರ ಇರಬೇಕು. ಯುವಜನತೆಯ ಸಬಲೀಕರಣ ಮತ್ತು ಶಿಕ್ಷಣ ಇಲಾಖೆಯಿಂದ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಅಂದಾಗ ಮಾತ್ರ ಜನಸಂಖ್ಯೆ ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.</p>.<p>ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೆ.ನಾಗರಾಜ, ಆರ್ಸಿಎಚ್ ಅಧಿಕಾರಿ ಡಾ.ಕೆ.ವಿಜಯ, ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸುರೇಂದ್ರಬಾಬು, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕೆ.ವಿಜಯಾ, ತಾಲ್ಲೂಕು ಆರೋಗ್ಯ ಅಧಿಕಾರಿ ಮಹ್ಮದ ಶಾಕೀರ ಇದ್ದರು. ವಿವಿಧ ಕಾಲೇಜಿನಗಳ ವಿದ್ಯಾರ್ಥಿಗಳು ಇದ್ದರು.</p>.<p class="Subhead"><strong>ಅಭಿವೃದ್ಧಿಯ ವೇಗಕ್ಕೆ ಮಾರಕ:</strong>ದೇಶದ ಅಭಿವೃದ್ಧಿಯ ವೇಗಕ್ಕೆ ಜನಸಂಖ್ಯಾ ಬೆಳವಣಿಗೆ ಮಾರಕವಾಗಿದೆ ಎಂದು ಎಲ್ವಿಡಿ ಕಾಲೇಜಿನ ಉಪನ್ಯಾಸಕ ಚನ್ನಮಲ್ಲಿಕಾರ್ಜುನ ಹೇಳಿದರು.</p>.<p>ತಾರಾನಾಥ ಶಿಕ್ಷಣ ಸಂಸ್ಥೆಯ ಬಿಆರ್ಬಿ ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>1989ರಿಂದ ಜನಸಂಖ್ಯಾ ದಿನಾಚರಣೆ ಆರಚಣೆ ಮಾಡಲಾಗುತ್ತಿದೆ. 1947ರಿಂದ ಭಾರತ ಸಾಕಷ್ಟು ಅಭಿವೃದ್ಧಿ ಹೊಂದುತ್ತಾ ಬಂದಿದೆ. ಆದರೆ, ಜನಸಂಖ್ಯಾ ಬೆಳವಣಿಗೆ ಅಭಿವೃದ್ಧಿಯ ವೇಗಕ್ಕೆ ಮಾರಕವಾಗಿದೆ ಎಂದರು.</p>.<p>1960ರಿಂದ 1974ರ ಅವಧಿಯಲ್ಲಿ ಪ್ರಪಂಚದ ಜನಸಂಖ್ಯೆ 400 ಕೋಟಿ ಇತ್ತು. 1987ಕ್ಕೆ 500 ಕೋಟಿಗೆ ಏರಿತು. ಈಗ 771 ಕೋಟಿಯಾಗಿದೆ. ಜನಸಂಖ್ಯೆ ದ್ವಿಗುಣಗೊಳ್ಳುತ್ತಿರುವುದು ಮನುಕುಲಕ್ಕೆ ಎಚ್ಚರಿಕೆ ಗಂಟೆಯಾಗಿದೆ ಎಂದು ತಿಳಿಸಿದರು.</p>.<p>1901ರಲ್ಲಿ ದೇಶದ ಜನಸಂಖ್ಯೆ 23 ಕೋಟಿಯಿತ್ತು, 1956ಕ್ಕೆ 36 ಆಗಿತ್ತು. 2011ರ ಜನಗಣತಿ ಪ್ರಕಾರ 121 ಕೋಟಿಗೆ ಏರಿಕೆಯಾಗಿತ್ತು. ಜನಸಂಖ್ಯೆ ಹೆಚ್ಚಿದಂತೆ ಭೂಮಿ ಹೆಚ್ಚಳವಾಗಲ್ಲ. ಇದು ನೈಸರ್ಗಿಕ ಅಸಮತೋಲನಕ್ಕೆ ಕಾರಣವಾಗಲಿದ್ದು, ಜನಸಂಖ್ಯೆ ನಿಯಂತ್ರಣ ಮಹತ್ವದ್ದಾಗಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಬಿ.ದೇವರೆಡ್ಡಿ ಮಾತನಾಡಿ, ಜನಸಂಖ್ಯಾ ಸ್ಪೋಟದಿಂದ ಅಧಿಕ ಪ್ರಮಾಣದ ವಲಸೆ, ಶಿಶುಮರಣ ದರ ಹಾಗೂ ಕೊಳಚೆ ಪ್ರದೇಶಗಳು ಹೆಚ್ಚುತ್ತಿವೆ ಎಂದರು.</p>.<p>ಕನ್ನಡ ಉಪನ್ಯಾಸಕ ಚನ್ನಬಸಯ್ಯ, ಎನ್.ಮಲ್ಲಿಕಾರ್ಜುನ, ಎಸ್.ಯು.ಬಸವರಾಜ ಇದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ತಿಪ್ಪಣ್ಣ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜನಸಂಖ್ಯಾ ನಿಯಂತ್ರಣದ ಕ್ರಮಗಳನ್ನು ಪ್ರತಿಯೊಬ್ಬರ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಎಂ.ಕೆ.ಎಸ್.ನಸೀರ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಜನಸಂಖ್ಯಾ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ವಿಶ್ವದ ಜನಸಂಖ್ಯೆ 500 ಕೋಟಿಗೆ ತಲುಪಿದಾಗಿನಿಂದ ವಿಶ್ವ ಜನಸಂಖ್ಯಾ ದಿನ ಆಚರಿಸಲು ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುನಿಸೆಫ್ ತೀರ್ಮಾನಿಸಿದೆ. 1987ರ ಜುಲೈ 11ರಂದು ಜನಸಂಖ್ಯಾ ದಿನಾಚರಣೆ ಆರಂಭಿಸಲಾಗಿದೆ. ಜನಸಂಖ್ಯಾ ಹೆಚ್ಚಳದಿಂದಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಸಲು ಪ್ರತಿವರ್ಷ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದರು.</p>.<p>ದೇಶದಲ್ಲಿ ಪ್ರತಿ ನಿಮಿಷಕ್ಕೆ 29 ಮಕ್ಕಳು, ಗಂಟೆಗೆ 1,768, ದಿನಕ್ಕೆ 42,434 ಹಾಗೂ ತಿಂಗಳಿಗೆ 1.55 ಕೋಟಿ ಮಕ್ಕಳು ಜನಿಸುತ್ತಿದ್ದು, ಜನಸಂಖ್ಯಾ ಸ್ಪೋಟ ಹೆಚ್ಚಾಗಿ ಸಮಸ್ಯೆಗಳು ಉದ್ಭವಿಸುತ್ತವೆ. ಆದ್ದರಿಂದ ಜನಸಂಖ್ಯೆ ತಡೆಗಟ್ಟಲು ಇರುವ ಮಾರ್ಗಗಳನ್ನು ಎಲ್ಲರೂ ಅನುಸರಿಸಬೇಕು ಎಂದು ತಿಳಿಸಿದರು.</p>.<p>ಮದುವೆ ಮಾಡಿಕೊಳ್ಳುವ ವರನಿಗೆ 21 ಹಾಗೂ ವಧುವಿಗೆ 18 ವರ್ಷ ತುಂಬಿರಬೇಕು. ಇಬ್ಬರ ನಡುವೆ 4 ವರ್ಷದ ಅಂತರ ಇರಬೇಕು. ಯುವಜನತೆಯ ಸಬಲೀಕರಣ ಮತ್ತು ಶಿಕ್ಷಣ ಇಲಾಖೆಯಿಂದ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಅಂದಾಗ ಮಾತ್ರ ಜನಸಂಖ್ಯೆ ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.</p>.<p>ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೆ.ನಾಗರಾಜ, ಆರ್ಸಿಎಚ್ ಅಧಿಕಾರಿ ಡಾ.ಕೆ.ವಿಜಯ, ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸುರೇಂದ್ರಬಾಬು, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕೆ.ವಿಜಯಾ, ತಾಲ್ಲೂಕು ಆರೋಗ್ಯ ಅಧಿಕಾರಿ ಮಹ್ಮದ ಶಾಕೀರ ಇದ್ದರು. ವಿವಿಧ ಕಾಲೇಜಿನಗಳ ವಿದ್ಯಾರ್ಥಿಗಳು ಇದ್ದರು.</p>.<p class="Subhead"><strong>ಅಭಿವೃದ್ಧಿಯ ವೇಗಕ್ಕೆ ಮಾರಕ:</strong>ದೇಶದ ಅಭಿವೃದ್ಧಿಯ ವೇಗಕ್ಕೆ ಜನಸಂಖ್ಯಾ ಬೆಳವಣಿಗೆ ಮಾರಕವಾಗಿದೆ ಎಂದು ಎಲ್ವಿಡಿ ಕಾಲೇಜಿನ ಉಪನ್ಯಾಸಕ ಚನ್ನಮಲ್ಲಿಕಾರ್ಜುನ ಹೇಳಿದರು.</p>.<p>ತಾರಾನಾಥ ಶಿಕ್ಷಣ ಸಂಸ್ಥೆಯ ಬಿಆರ್ಬಿ ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>1989ರಿಂದ ಜನಸಂಖ್ಯಾ ದಿನಾಚರಣೆ ಆರಚಣೆ ಮಾಡಲಾಗುತ್ತಿದೆ. 1947ರಿಂದ ಭಾರತ ಸಾಕಷ್ಟು ಅಭಿವೃದ್ಧಿ ಹೊಂದುತ್ತಾ ಬಂದಿದೆ. ಆದರೆ, ಜನಸಂಖ್ಯಾ ಬೆಳವಣಿಗೆ ಅಭಿವೃದ್ಧಿಯ ವೇಗಕ್ಕೆ ಮಾರಕವಾಗಿದೆ ಎಂದರು.</p>.<p>1960ರಿಂದ 1974ರ ಅವಧಿಯಲ್ಲಿ ಪ್ರಪಂಚದ ಜನಸಂಖ್ಯೆ 400 ಕೋಟಿ ಇತ್ತು. 1987ಕ್ಕೆ 500 ಕೋಟಿಗೆ ಏರಿತು. ಈಗ 771 ಕೋಟಿಯಾಗಿದೆ. ಜನಸಂಖ್ಯೆ ದ್ವಿಗುಣಗೊಳ್ಳುತ್ತಿರುವುದು ಮನುಕುಲಕ್ಕೆ ಎಚ್ಚರಿಕೆ ಗಂಟೆಯಾಗಿದೆ ಎಂದು ತಿಳಿಸಿದರು.</p>.<p>1901ರಲ್ಲಿ ದೇಶದ ಜನಸಂಖ್ಯೆ 23 ಕೋಟಿಯಿತ್ತು, 1956ಕ್ಕೆ 36 ಆಗಿತ್ತು. 2011ರ ಜನಗಣತಿ ಪ್ರಕಾರ 121 ಕೋಟಿಗೆ ಏರಿಕೆಯಾಗಿತ್ತು. ಜನಸಂಖ್ಯೆ ಹೆಚ್ಚಿದಂತೆ ಭೂಮಿ ಹೆಚ್ಚಳವಾಗಲ್ಲ. ಇದು ನೈಸರ್ಗಿಕ ಅಸಮತೋಲನಕ್ಕೆ ಕಾರಣವಾಗಲಿದ್ದು, ಜನಸಂಖ್ಯೆ ನಿಯಂತ್ರಣ ಮಹತ್ವದ್ದಾಗಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಬಿ.ದೇವರೆಡ್ಡಿ ಮಾತನಾಡಿ, ಜನಸಂಖ್ಯಾ ಸ್ಪೋಟದಿಂದ ಅಧಿಕ ಪ್ರಮಾಣದ ವಲಸೆ, ಶಿಶುಮರಣ ದರ ಹಾಗೂ ಕೊಳಚೆ ಪ್ರದೇಶಗಳು ಹೆಚ್ಚುತ್ತಿವೆ ಎಂದರು.</p>.<p>ಕನ್ನಡ ಉಪನ್ಯಾಸಕ ಚನ್ನಬಸಯ್ಯ, ಎನ್.ಮಲ್ಲಿಕಾರ್ಜುನ, ಎಸ್.ಯು.ಬಸವರಾಜ ಇದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ತಿಪ್ಪಣ್ಣ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>