ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕವಿತಾಳ: ಆಶಾಕಿರಣ ಯೋಜನೆಯಡಿ ನೇತ್ರ ತಪಾಸಣೆ

Published 26 ಫೆಬ್ರುವರಿ 2024, 14:03 IST
Last Updated 26 ಫೆಬ್ರುವರಿ 2024, 14:03 IST
ಅಕ್ಷರ ಗಾತ್ರ

ಕವಿತಾಳ: ‘ಆಶಾಕಿರಣ ಯೋಜನೆಯ ಮೊದಲ ಹಂತದಲ್ಲಿ ದೃಷ್ಟಿದೋಷ ಇರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ಎರಡನೇ ಹಂತದಲ್ಲಿ ಕಣ್ಣಿನ ಪರೀಕ್ಷೆ ನಡೆಸಲಾಗುವುದು’ ಎಂದು ನೇತ್ರಾಧಿಕಾರಿ ಯಲ್ಲಪ್ಪ ಹೇಳಿದರು.

ಸಮೀಪದ ಹಾಲಾಪುರ ಗ್ರಾಮದಲ್ಲಿ ಸೋಮವಾರ ನಡೆದ ನೇತ್ರ ತಪಾಸಣೆ ಶಿಬಿರದಲ್ಲಿ ಮಾತನಾಡಿ,‘ನೇತ್ರ ತಪಾಸಣೆಯ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ದಾಖಲಿಸಲಾಗುತ್ತದೆ. ದೃಷ್ಟಿದೋಷ ಕಂಡುಬಂದಲ್ಲಿ ಅವರ ವಿಳಾಸಕ್ಕೆ ಕನ್ನಡಕ ಕಳುಹಿಸಲಾಗುತ್ತದೆ. ಕ್ಯಾಟರಾಕ್ಟ್‌ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆ ಅಗತ್ಯ ಕಂಡುಬಂದಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರಗಳಲ್ಲಿ ಶಸ್ತ್ರಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಹೇಳಿದರು.

ಡಾ.ಶಿವಪ್ಪ, ಹಿರಿಯ ಆರೋಗ್ಯ ಸಹಾಯಕ ಅಧಿಕಾರಿ ಸುಧೀರಬಾಬು, ಕಿರಿಯ ಆರೋಗ್ಯ ಸಹಾಯಕ ಶ್ರೀನಿವಾಸ, ಸುಮಾ, ಸುಜಾತ ಮತ್ತು ಸುಮಂಗಲಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT