<p><strong>ಸಿಂಧನೂರು:</strong> ತಾಲ್ಲೂಕಿನ ಜಂಗಮರಹಟ್ಟಿ ಗ್ರಾಮದಲ್ಲಿ ಸಾಲಬಾಧೆ ತಾಳದೆ ರೈತರೊಬ್ಬರು ನೇಣು ಹಾಕಿಕೊಂಡು ಭಾನುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಗ್ರಾಮದ ಶಂಕರಪ್ಪ ಮಲ್ಲಪ್ಪ ಅಡ್ಡೇರ(48) ಮೃತರು. ಮೃತ ಶಂಕರಪ್ಪನ ತಾಯಿಯ ಹೆಸರಿನಲ್ಲಿ 3.18 ಎಕರೆ ಜಮೀನು ಇದೆ. ಶಂಕರಪ್ಪ ಅವರು ಜಮೀನು ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಜವಳಗೇರಾ ಗ್ರಾಮದ ಕೆನರಾ ಬ್ಯಾಂಕ್ನಲ್ಲಿ ₹1.30 ಲಕ್ಷ ಹಾಗೂ ಕೈಸಾಲ ಅಂದಾಜು ₹ 6 ಲಕ್ಷ ಸಾಲ ಮಾಡಿದ್ದರು.</p>.<p>ಹೆಂಡತಿ ಮಕ್ಕಳು ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಶಂಕರಪ್ಪ ಮಾತ್ರ ಒಂಟಿಯಾಗಿ ಜಂಗಮರಹಟ್ಟಿಯಲ್ಲಿ ವಾಸ ಮಾಡುತ್ತಿದ್ದರು. ಸಾಲದ ಬಾಧೆ ತಾಳಲಾರದೆ ಬೆಳಿಗ್ಗೆ 8.30 ಗಂಟೆಗೆ ತಮ್ಮ ಮನೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತದೇಹವನ್ನು ತಂದು ಸಿಂಧನೂರಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತ ಶಂಕರಪ್ಪನ ಪುತ್ರ ಬಸವಲಿಂಗ ನೀಡಿದ ದೂರಿನ ಮೇರೆಗೆ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ತಾಲ್ಲೂಕಿನ ಜಂಗಮರಹಟ್ಟಿ ಗ್ರಾಮದಲ್ಲಿ ಸಾಲಬಾಧೆ ತಾಳದೆ ರೈತರೊಬ್ಬರು ನೇಣು ಹಾಕಿಕೊಂಡು ಭಾನುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಗ್ರಾಮದ ಶಂಕರಪ್ಪ ಮಲ್ಲಪ್ಪ ಅಡ್ಡೇರ(48) ಮೃತರು. ಮೃತ ಶಂಕರಪ್ಪನ ತಾಯಿಯ ಹೆಸರಿನಲ್ಲಿ 3.18 ಎಕರೆ ಜಮೀನು ಇದೆ. ಶಂಕರಪ್ಪ ಅವರು ಜಮೀನು ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಜವಳಗೇರಾ ಗ್ರಾಮದ ಕೆನರಾ ಬ್ಯಾಂಕ್ನಲ್ಲಿ ₹1.30 ಲಕ್ಷ ಹಾಗೂ ಕೈಸಾಲ ಅಂದಾಜು ₹ 6 ಲಕ್ಷ ಸಾಲ ಮಾಡಿದ್ದರು.</p>.<p>ಹೆಂಡತಿ ಮಕ್ಕಳು ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಶಂಕರಪ್ಪ ಮಾತ್ರ ಒಂಟಿಯಾಗಿ ಜಂಗಮರಹಟ್ಟಿಯಲ್ಲಿ ವಾಸ ಮಾಡುತ್ತಿದ್ದರು. ಸಾಲದ ಬಾಧೆ ತಾಳಲಾರದೆ ಬೆಳಿಗ್ಗೆ 8.30 ಗಂಟೆಗೆ ತಮ್ಮ ಮನೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತದೇಹವನ್ನು ತಂದು ಸಿಂಧನೂರಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತ ಶಂಕರಪ್ಪನ ಪುತ್ರ ಬಸವಲಿಂಗ ನೀಡಿದ ದೂರಿನ ಮೇರೆಗೆ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>