ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುರುಘಾ ಮಠದ ಶರಣರು ಸಮಾಜದ ಅಂಕುಡೊಂಕು ತಿದ್ದುವ ಪ್ರಗತಿಪರ ಚಿಂತನೆ ಮೈಗೂಡಿಸಿಕೊಂಡು ನಡೆದಿದ್ದಾರೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆಪಾದನೆ ಕೇಳಿ ಬಂದಿದೆ. ಜನಸಾಮಾನ್ಯರಿಗೂ ಹಾಗೂ ಮಠಾಧೀಶರು ಸೇರಿ ಎಲ್ಲರಿಗೂ ಕಾನೂನು ಒಂದೇ. ಸರ್ಕಾರ ಹಾಗೂ ಜನಪ್ರತಿನಿಧಿಗಳು ಯಾವುದೇ ಒತ್ತಡ ಹೇರದೇ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಸಾರ್ವಜನಿಕರಿಗೆ ಸಂಶಯಬಾರದೇ ಕಾಯ್ದೆಯ ಆಶಯ ಈಡೇರಿಸಬೇಕು ಎಂದರು.