ರಾಯಚೂರು: ಜಿಲ್ಲೆಯಲ್ಲಿ ಆಡಳಿತ ಕುಸಿದು ಹೋಗಿದ್ದು ಕಂದಾಯ ಇಲಾಖೆಯಲ್ಲಿ ರೈತರ ಶೋಷಣೆಯಾಗುತ್ತಿದೆ. ವೇ ಬ್ರಿಡ್ಜ್ ಗಳಲ್ಲಿ ಮೋಸ ಮಾಡಲಾಗುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.
ಜಿಲ್ಲೆಯ ವಿವಿಧ ಇಲಾಖೆಗಳಿಂದ ರೈತರಿಗೆ ಶೋಷಣೆಯಾಗುತ್ತಿದ್ದು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಜರುಗಿಸಿಲ್ಲ. ನೋಂದಣಿ ಇಲಾಖೆ, ಕಂದಾಯ ಇಲಾಖೆಯಲ್ಲಿ ಭೂ ರಹಿತ ಪ್ರಮಾಣ ಪತ್ರ, ಭೂ ಗೇಣಿ ಪ್ರಮಾಣ ಪತ್ರ, ಭೂ ಹಿಡುವಳಿ ಹಾಗೂ ಇತರೆ ಕೆಲಸಗಳಿಗೆ ಮಧ್ಯವರ್ತಿಗಳಿಲ್ಲದೇ ಯಾವುದೇ ಕೆಲಸ ಆಗುತ್ತಿಲ್ಲ. ರೈತರಿಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ದೂರಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮರಳಿ, ಉಪಾಧ್ಯಕ್ಷ ತಿಮ್ಮಣ್ಣ ಭೋವಿ, ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ ನಾಯಕ, ಸಿ.ಎಚ್. ರವಿ, ರಾಮಯ್ಯ ಜವಳಗೇರಾ, ಶಿವರಾಜ ಮಾರಲದಿನ್ನಿ, ವೈ. ಬಸವರಾಜ ನಾಯಕ, ತಾಯಪ್ಪ ಮಸ್ಕಿ, ಇದ್ದರು.