<p><strong>ಸಿರವಾರ</strong>: ಮಣ್ಣೆತ್ತಿನ ಅಮಾವಾಸ್ಯೆ ಕಾರಣಕ್ಕೆ ಪಿಒಪಿಯ ಬಣ್ಣ ಬಣ್ಣದ ಎತ್ತಿನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ರೈತರನ್ನು ಆಕರ್ಷಿಸುತ್ತಿವೆ.</p>.<p>ರೈತರು ತಮ್ಮ ಹೊಲದಲ್ಲಿನ ಎರೆಮಣ್ಣಿನಿಂದ ಎತ್ತುಗಳ ಮೂರ್ತಿಗಳನ್ನು ಮಾಡಿ ಅಮಾವಾಸ್ಯೆಯ ದಿನ ಪೂಜಿಸಿ ನಂತರ ಮನೆಯ ಮಾಳಿಗೆಯ ಮೇಲೆ ಇಡುವರು. ಮಳೆಯಿಂದ ಎತ್ತಿನ ಮೂರ್ತಿಗಳು ಎಷ್ಟು ಬೇಗ ಕರಗುತ್ತವೆಯೋ ಅಷ್ಟು ಸಮೃದ್ಧಿ ಮಳೆ ಆಗುತ್ತದೆ ಎಂಬುದು ರೈತರ ನಂಬಿಕೆ.</p>.<p class="Subhead"><strong>ಪಿಒಪಿ ಮೂರ್ತಿಗಳಿಗೆ ಹೆಚ್ಚಿದ ಬೇಡಿಕೆ</strong>: ಕೊರೊನಾ ಕಾರಣಕ್ಕೆ ಎರಡು ವರ್ಷಗಳಿಂದ ಎತ್ತಿನ ಮೂರ್ತಿ ಮಾರಾಟ ಅಷ್ಟಾಗಿ ನಡೆದಿರಲಿಲ್ಲ. ಆದರೆ ಈ ವರ್ಷ ಕೊರೊನಾ ನಿಯಮಗಳಲ್ಲಿ ಸಡಿಲಿಕೆ ಇರುವುದರಿಂದ ಹತ್ತಾರು ವ್ಯಾಪಾರಸ್ಥರು ರಸ್ತೆ ಬದಿ ಹಾಗೂ ಮಾರುಕಟ್ಟೆಯಲ್ಲಿ ಅಂಗಡಿಗಳನ್ನು ತೆರೆದಿದ್ದಾರೆ.</p>.<p>ಮಣ್ಣಿನ ಎತ್ತುಗಳಿಗಿಂತ ಪಿಒಪಿಯಿಂದ ಮಾಡಿದ ಎತ್ತಿನ ಮೂರ್ತಿಗಳು ಆಕರ್ಷಿಸುತ್ತಿವೆ. ಗಾತ್ರಕ್ಕನುಗುಣವಾಗಿ ಒಂದು ಜತೆ ಎತ್ತಿಗೆ ₹100 ರಿಂದ ₹ 1000 ದವರೆಗೂ ತೆಗೆದುಕೊಳ್ಳಲಾಗುತ್ತಿದೆ. ರೈತರು ಬಣ್ಣ ಬಣ್ಣದ ಮೂರ್ತಿಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದು, ಮಣ್ಣಿನ ಎತ್ತುಗಳಿಗೆ ಬೇಡಿಕೆ ಕಡಿಮೆಯಾಗಿದೆ ಎಂದು ಮಾರಾಟಗಾರ ಅಮರೇಶ ಕುಂಬಾರ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ಮಣ್ಣೆತ್ತಿನ ಅಮಾವಾಸ್ಯೆ ಕಾರಣಕ್ಕೆ ಪಿಒಪಿಯ ಬಣ್ಣ ಬಣ್ಣದ ಎತ್ತಿನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ರೈತರನ್ನು ಆಕರ್ಷಿಸುತ್ತಿವೆ.</p>.<p>ರೈತರು ತಮ್ಮ ಹೊಲದಲ್ಲಿನ ಎರೆಮಣ್ಣಿನಿಂದ ಎತ್ತುಗಳ ಮೂರ್ತಿಗಳನ್ನು ಮಾಡಿ ಅಮಾವಾಸ್ಯೆಯ ದಿನ ಪೂಜಿಸಿ ನಂತರ ಮನೆಯ ಮಾಳಿಗೆಯ ಮೇಲೆ ಇಡುವರು. ಮಳೆಯಿಂದ ಎತ್ತಿನ ಮೂರ್ತಿಗಳು ಎಷ್ಟು ಬೇಗ ಕರಗುತ್ತವೆಯೋ ಅಷ್ಟು ಸಮೃದ್ಧಿ ಮಳೆ ಆಗುತ್ತದೆ ಎಂಬುದು ರೈತರ ನಂಬಿಕೆ.</p>.<p class="Subhead"><strong>ಪಿಒಪಿ ಮೂರ್ತಿಗಳಿಗೆ ಹೆಚ್ಚಿದ ಬೇಡಿಕೆ</strong>: ಕೊರೊನಾ ಕಾರಣಕ್ಕೆ ಎರಡು ವರ್ಷಗಳಿಂದ ಎತ್ತಿನ ಮೂರ್ತಿ ಮಾರಾಟ ಅಷ್ಟಾಗಿ ನಡೆದಿರಲಿಲ್ಲ. ಆದರೆ ಈ ವರ್ಷ ಕೊರೊನಾ ನಿಯಮಗಳಲ್ಲಿ ಸಡಿಲಿಕೆ ಇರುವುದರಿಂದ ಹತ್ತಾರು ವ್ಯಾಪಾರಸ್ಥರು ರಸ್ತೆ ಬದಿ ಹಾಗೂ ಮಾರುಕಟ್ಟೆಯಲ್ಲಿ ಅಂಗಡಿಗಳನ್ನು ತೆರೆದಿದ್ದಾರೆ.</p>.<p>ಮಣ್ಣಿನ ಎತ್ತುಗಳಿಗಿಂತ ಪಿಒಪಿಯಿಂದ ಮಾಡಿದ ಎತ್ತಿನ ಮೂರ್ತಿಗಳು ಆಕರ್ಷಿಸುತ್ತಿವೆ. ಗಾತ್ರಕ್ಕನುಗುಣವಾಗಿ ಒಂದು ಜತೆ ಎತ್ತಿಗೆ ₹100 ರಿಂದ ₹ 1000 ದವರೆಗೂ ತೆಗೆದುಕೊಳ್ಳಲಾಗುತ್ತಿದೆ. ರೈತರು ಬಣ್ಣ ಬಣ್ಣದ ಮೂರ್ತಿಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದು, ಮಣ್ಣಿನ ಎತ್ತುಗಳಿಗೆ ಬೇಡಿಕೆ ಕಡಿಮೆಯಾಗಿದೆ ಎಂದು ಮಾರಾಟಗಾರ ಅಮರೇಶ ಕುಂಬಾರ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>