ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಚೆಗೆ ಶೇ 45 ರಷ್ಟು ರಸಗೊಬ್ಬರ ಬೆಲೆ ಏರಿಕೆ ಮಾಡುವ ಮೂಲಕ ರೈತರನ್ನು ಕೃಷಿಯಿಂದ ವಿಮುಖರಾಗಲು ಮಾಡಲು ಹೊರಟಿದೆ. ಅಂತರರಾಷ್ಟ್ರೀಯ ಕಚ್ಚಾತೈಲ ಬೆಲೆ ಏರಿಕೆಯ ನೆಪದಲ್ಲಿ ಪೆಟ್ರೋಲ್, ಡಿಸೇಲ್, ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು ಖಂಡನೀಯ. ಮೇಕ್ ಇನ್ ಇಂಡಿಯಾ, ಆತ್ಮ ನಿರ್ಭರ ಭಾರತ ಎಂಬೆಲ್ಲ ಘೋಷಣೆ ಮಾಡಿ ಈಗ ಬೆಲೆ ನಿಯಂತ್ರಣಕ್ಕೆ ಮುಂದಾಗದೇ ರೈತ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.