‘ಬೆಳೆಗಳನ್ನು ತಿನ್ನುವುದರ ಜತೆಗೆ ಕಾಡು ಹಂದಿಗಳು ಹೊಲದಲ್ಲಿ ಉರುಳಾಡಿ ಬೆಳೆಗಳನ್ನು ನಾಶಪಡಿಸುತ್ತಿವೆ, ಬೆಳೆಗ್ಗೆಯಿಂದ ಸಂಜೆಯ ವರೆಗೆ ರೈತರು ಹೊಲದಲ್ಲಿ ಕೆಲಸ ಮಾಡುವುದರಿಂದ ಪ್ರಾಣಿಗಳ ದಾಳಿಯನ್ನು ತಡೆಯಬಹುದು, ರಾತ್ರಿ ಸಮಯದಲ್ಲಿ ಕಾಡು ಹಂದಿಗಳ ಹಾವಳಿಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಕತ್ತಲಲ್ಲಿ ಮನುಷ್ಯರ ಮೇಲೆ ದಾಳಿ ಮಾಡುವ ಭಯದಿಂದ ಹೊಲಗಳಿಗೆ ಹೋಗಲು ಹಿಂದೇಟು ಹಾಕುವಂತಾಗಿದೆ’ ಎಂದು ರೈತ ಮಲ್ಲಪ್ಪ ನೆಲಕೊಳ ತಿಳಿಸಿದರು.