<p><strong>ರಾಯಚೂರು:</strong> ಕೇಂದ್ರ ಸರ್ಕಾರ ರೈತರ ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸಿಪಿಐ(ಎಂಎಲ್)ರೆಡ್ಸ್ಟಾರ್ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಕೃಷಿ, ಎಪಿಎಂಸಿ, ಭೂ ಸುಧಾರಣೆ ಇತರೆ ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಗಳು ಕಾರ್ಪೋರೇಟ್ ಕಾಯ್ದೆಗಳಾಗಿದ್ದು, ಕೂಡಲೇ ಹಿಂಪಡೆಯಬೇಕು. ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲಿಸಿ ನಿರಂತರ ಹೋರಾಟಕ್ಕೆ ಸಹಕರಿಸಲಾಗುವುದು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿದ್ಯುತ್ ಮಸೂದೆಯೊಂದಿಗೆ ಮೂರು ದುಷ್ಕೃತ್ಯಗಳನ್ನು ಹಿಂತೆಗೆದುಕೊಳ್ಳಬೇಕು ಎಂಬ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದು ರೈತ ಸಂಘಟನೆಗಳು ಘೋಷಿಸಿವೆ. ಸಾಂಸ್ಥಿಕರಣ ಹಾಗೂ ರಾಷ್ಟ್ರೀಯ ಗುಲಾಮಗಿರಿಯ ವಿರುದ್ಧ ಈ ಹೋರಾಟದಲ್ಲಿ ದೇಶಾದಾದ್ಯಂತ ರೈತರ ಹಾಗೂ ಜನರು ಬೆಂಬಲಿಸುತ್ತಿದ್ದಾರೆ. ರೈತರ ಹೋರಾಟಕ್ಕೆ ಬೆಂಬಲಿಸುವುದರೊಂದಿಗೆ ಕೇಂದ್ರದ ಫ್ಯಾಸಿಸ್ಟ್ ಮೋದಿ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಸಿಪಿಐಎಂಎಲ್ ರೆಡ್ ಸ್ಟಾರ್ ರಾಜ್ಯ ಸಮಿತಿ ಸದಸ್ಯ ಜಿ.ಅಮರೇಶ, ತಾಲ್ಲೂಕು ಕಾರ್ಯದರ್ಶಿ ರವಿದಾದಾಸ್, ಪದಾಧಿಕಾರಿ ಶೇಖ್ ಹುಸೇನ್ಬಾಷಾ, ಕರಿಮುಲ್ಲಾ, ಲಲಿತಮ್ಮ, ನರಸಿಂಹಲು, ಆಂಜನೇಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕೇಂದ್ರ ಸರ್ಕಾರ ರೈತರ ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸಿಪಿಐ(ಎಂಎಲ್)ರೆಡ್ಸ್ಟಾರ್ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಕೃಷಿ, ಎಪಿಎಂಸಿ, ಭೂ ಸುಧಾರಣೆ ಇತರೆ ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಗಳು ಕಾರ್ಪೋರೇಟ್ ಕಾಯ್ದೆಗಳಾಗಿದ್ದು, ಕೂಡಲೇ ಹಿಂಪಡೆಯಬೇಕು. ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲಿಸಿ ನಿರಂತರ ಹೋರಾಟಕ್ಕೆ ಸಹಕರಿಸಲಾಗುವುದು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿದ್ಯುತ್ ಮಸೂದೆಯೊಂದಿಗೆ ಮೂರು ದುಷ್ಕೃತ್ಯಗಳನ್ನು ಹಿಂತೆಗೆದುಕೊಳ್ಳಬೇಕು ಎಂಬ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದು ರೈತ ಸಂಘಟನೆಗಳು ಘೋಷಿಸಿವೆ. ಸಾಂಸ್ಥಿಕರಣ ಹಾಗೂ ರಾಷ್ಟ್ರೀಯ ಗುಲಾಮಗಿರಿಯ ವಿರುದ್ಧ ಈ ಹೋರಾಟದಲ್ಲಿ ದೇಶಾದಾದ್ಯಂತ ರೈತರ ಹಾಗೂ ಜನರು ಬೆಂಬಲಿಸುತ್ತಿದ್ದಾರೆ. ರೈತರ ಹೋರಾಟಕ್ಕೆ ಬೆಂಬಲಿಸುವುದರೊಂದಿಗೆ ಕೇಂದ್ರದ ಫ್ಯಾಸಿಸ್ಟ್ ಮೋದಿ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಸಿಪಿಐಎಂಎಲ್ ರೆಡ್ ಸ್ಟಾರ್ ರಾಜ್ಯ ಸಮಿತಿ ಸದಸ್ಯ ಜಿ.ಅಮರೇಶ, ತಾಲ್ಲೂಕು ಕಾರ್ಯದರ್ಶಿ ರವಿದಾದಾಸ್, ಪದಾಧಿಕಾರಿ ಶೇಖ್ ಹುಸೇನ್ಬಾಷಾ, ಕರಿಮುಲ್ಲಾ, ಲಲಿತಮ್ಮ, ನರಸಿಂಹಲು, ಆಂಜನೇಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>