<p><strong>ಸಿಂಧನೂರು (ರಾಯಚೂರು ಜಿಲ್ಲೆ)</strong>: ಮುಂಗಾರು ಮತ್ತು ಹಿಂಗಾರು ಜೋಳ ಖರೀದಿಗೆ ರಾಜ್ಯ ಸರ್ಕಾರ ಮೀನಮೇಷ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಇತರ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಕರೆ ನೀಡಿರುವ ಸಿಂಧನೂರು ಬಂದ್ಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. </p><p>ಸೋಮವಾರ ಬೆಳಗಿನ 5 ಗೆ ಟೆಯಿಂದಲೇ ಸಂಘಟನೆಗಳ ಕಾರ್ಯಕರ್ತರು ಬಸ್ ಡಿಪೊಕ್ಕೆ ತೆರಳಿ ಬಸ್ಗಳನ್ನು ಹೊರಗೆ ಬಿಡದಂತೆ ತಡೆದರು. ಪೊಲೀಸರು ರಾಯಚೂರಿನಿಂದ ಗಂಗಾವತಿ ಬಳ್ಳಾರಿ ಕುಷ್ಟಗಿ ಮತ್ತಿತರ ಕಡೆ ಹೋಗುವ ಬರುವ ಬಸ್ಗಳನ್ನು ಬೇರೆ ಪರ್ಯಾಯ ಮಾರ್ಗಗಳ ಮೂಲಕ ಕಳಿಸುವ ವ್ಯವಸ್ಥೆ ಮಾಡಿದರು. </p><p>ಎಪಿಎಂಸಿ, ಹಳೆಯ ಬಜಾರ್, ಬಸ್ ನಿಲ್ದಾಣ ರಸ್ತೆ,, ಗಂಗಾವತಿ ರಸ್ತೆ ಸೇರಿದಂತೆ ಎಲ್ಲ ಮಾರುಕಟ್ಟೆಗಳ ಕಿರಾಣಿ ಅಂಗಡಿಗಳು, ಹೋಟೆಲ್ ಗಳು ಸಣ್ಣಪುಟ್ಟ ಟೀ ಅಂಗಡಿಗಳು ಸೇರಿ ಎಲ್ಲ ಬಗೆಯ ವ್ಯವಹಾರ ವಹಿವಾಟುಗಳು ಸ್ಥಗಿತಗೊಂಡಿವೆ </p><p>ರಾಜ್ಯ ರೈತ ಸಂಘದ ಮುಖಂಡರಾದ ಅಮೀನ್ ಪಾಶಾ ದಿದ್ದಿಗಿ, ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್. ಪೂಜಾರ ಬಸ್ವಂತರಾಯಗೌಡ ಪಾಟೀಲ, ಚಂದ್ರಶೇಖರ ಗೊರೆಬಾಳ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು (ರಾಯಚೂರು ಜಿಲ್ಲೆ)</strong>: ಮುಂಗಾರು ಮತ್ತು ಹಿಂಗಾರು ಜೋಳ ಖರೀದಿಗೆ ರಾಜ್ಯ ಸರ್ಕಾರ ಮೀನಮೇಷ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಇತರ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಕರೆ ನೀಡಿರುವ ಸಿಂಧನೂರು ಬಂದ್ಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. </p><p>ಸೋಮವಾರ ಬೆಳಗಿನ 5 ಗೆ ಟೆಯಿಂದಲೇ ಸಂಘಟನೆಗಳ ಕಾರ್ಯಕರ್ತರು ಬಸ್ ಡಿಪೊಕ್ಕೆ ತೆರಳಿ ಬಸ್ಗಳನ್ನು ಹೊರಗೆ ಬಿಡದಂತೆ ತಡೆದರು. ಪೊಲೀಸರು ರಾಯಚೂರಿನಿಂದ ಗಂಗಾವತಿ ಬಳ್ಳಾರಿ ಕುಷ್ಟಗಿ ಮತ್ತಿತರ ಕಡೆ ಹೋಗುವ ಬರುವ ಬಸ್ಗಳನ್ನು ಬೇರೆ ಪರ್ಯಾಯ ಮಾರ್ಗಗಳ ಮೂಲಕ ಕಳಿಸುವ ವ್ಯವಸ್ಥೆ ಮಾಡಿದರು. </p><p>ಎಪಿಎಂಸಿ, ಹಳೆಯ ಬಜಾರ್, ಬಸ್ ನಿಲ್ದಾಣ ರಸ್ತೆ,, ಗಂಗಾವತಿ ರಸ್ತೆ ಸೇರಿದಂತೆ ಎಲ್ಲ ಮಾರುಕಟ್ಟೆಗಳ ಕಿರಾಣಿ ಅಂಗಡಿಗಳು, ಹೋಟೆಲ್ ಗಳು ಸಣ್ಣಪುಟ್ಟ ಟೀ ಅಂಗಡಿಗಳು ಸೇರಿ ಎಲ್ಲ ಬಗೆಯ ವ್ಯವಹಾರ ವಹಿವಾಟುಗಳು ಸ್ಥಗಿತಗೊಂಡಿವೆ </p><p>ರಾಜ್ಯ ರೈತ ಸಂಘದ ಮುಖಂಡರಾದ ಅಮೀನ್ ಪಾಶಾ ದಿದ್ದಿಗಿ, ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್. ಪೂಜಾರ ಬಸ್ವಂತರಾಯಗೌಡ ಪಾಟೀಲ, ಚಂದ್ರಶೇಖರ ಗೊರೆಬಾಳ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>