ಈ ಸಂದರ್ಭದಲ್ಲಿ ರೈತ ಮುಖಂಡ ತಿಮ್ಮನಗೌಡ ಚಿಲ್ಕರಾಗಿ ಮಾತನಾಡಿ, ‘ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿದ್ದರೂ ಕಳೆದ ಮೂರು ಚುನಾವಣೆಗಳಲ್ಲಿ ಕ್ಷೇತ್ರದ ಜನರು ಪ್ರತಾಪಗೌಡ ಪಾಟೀಲರನ್ನು ಬೆಂಬಲಿಸಿದ್ದಾರೆ. 5ಎ ನಾಲೆ ಜಾರಿ ವಿಷಯದಲ್ಲಿ ಅವರು ಸ್ಪಂದಿಸದ ಕಾರಣ ರೈತ ವರ್ಗಕ್ಕೆ ನೋವಾಗಿದೆ. ತಾಂತ್ರಿಕ ಸಮಸ್ಯೆಯ ನೆಪವೊಡ್ಡಿ ನಾಲೆ ನಿರ್ಮಾಣದ ಬಗ್ಗೆ ಕಾಳಜಿ ವಹಿಸದಿರುವುದು ರೈತರಲ್ಲಿ ಬೇಸರ ಮೂಡಿಸಿದೆ’ ಎಂದರು.