<p><strong>ತುರ್ವಿಹಾಳ:</strong> ಪಟ್ಟಣ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಭತ್ತದ ಮೊದಲನೇ ಬೆಳೆ ಕಟಾವು ಮಾಡುವ ಹಂತಕ್ಕೆ ಬಂದಿದೆ. ಆದರೆ ಭತ್ತ ಕಟಾವು ಮಾಡುವ ಯಂತ್ರಗಳಿಂದಾಗಿ ರೈತರು ಪರದಾಡುವ ಪರಿಸ್ಥಿತಿ ಎದುರಾಗಿದೆ.</p>.<p>ಕಳೆದ ಮೂರು ದಿನಗಳಿಂದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೂ ಕೆಲ ಕಡೆಗಳಲ್ಲಿ ತುಂತುರು ಮಳೆ ಬರುತ್ತಿದೆ. ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲವೇನೋ ಎಂಬ ಆತಂಕ ಮೂಡಿದೆ.</p>.<p>ಪ್ರತಿ ವರ್ಷ ಆಂಧ್ರಪ್ರದೇಶ ಮತ್ತು ತಮಿಳುನಾಡು ಸೇರಿ ನೆರೆ ರಾಜ್ಯಗಳಿಂದ ಭತ್ತ ಕಟಾವು ಯಂತ್ರಗಳನ್ನು ಸ್ಥಳೀಯರು ಗುತ್ತಿಗೆ ಆಧಾರದಲ್ಲಿ ತರಸಿಕೊಳ್ಳುತ್ತಿದ್ದರು. ಇದರಿಂದ ರೈತರಿಗೆ ಅನುಕೂಲವಾಗುತ್ತಿತ್ತು.</p>.<p>ಈ ವರ್ಷ ನೆರೆ ರಾಜ್ಯದ ಭತ್ತ ಕಟಾವು ಯಂತ್ರಗಳು ಬಂದಿಲ್ಲ. ಸ್ಥಳೀಯ ಯಂತ್ರಗಳಿಂದ ಕಟಾವು ಮಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ರೈತ ಶಿವಪುತ್ರಪ್ಪ ಕೆಂಗೇರಿ ಅಳಲು ತೋಡಿಕೊಂಡರು.</p>.<p>15 ದಿನಗಳ ಹಿಂದೆ ಅಕಾಲಿಕ ಮಳೆಯಿಂದಾಗಿ ಕಾಳು ತುಂಬಿ ಕಂಗೊಳಿಸುವಂತೆ ಬೆಳೆದು ನಿಂತಿದ್ದ ಭತ್ತದ ಬೆಳೆ ನೆಲಕ್ಕೆ ಬಿದ್ದಿದೆ. ಅದು ಕಟಾವಿಗೆ ಸಮಯ ತೆಗೆದುಕೊಳ್ಳುತ್ತಿದೆ. ಮೋಡ ಕವಿದ ವಾತಾವರಣ ಇರುವುದರಿಂದ ರೈತರಿಗೆ ತೊಂದರೆಯಾಗಿದೆ.</p>.<p>ಭತ್ತ ಕಟಾವು ಮಾಡಲು ಒಂದು ಗಂಟೆಗೆ ಸುಮಾರು ₹2,200 ರಿಂದ ₹2,400 ಕೊಡುತ್ತೇನೆ ಎಂದರೂ ಯಂತ್ರಗಳು ಸಿಗುತ್ತಿಲ್ಲ. ಒಂದು ವಾರ ಮುಂಚಿತವಾಗಿ ನಿಗದಿಪಡಿಸಬೇಕು ಎಂದು ತುರ್ವಿಹಾಳ ಪಟ್ಟಣದ ರೈತ ಸಿರಾಜ್ ಪಾಷಾ ದಳಪತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರ್ವಿಹಾಳ:</strong> ಪಟ್ಟಣ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಭತ್ತದ ಮೊದಲನೇ ಬೆಳೆ ಕಟಾವು ಮಾಡುವ ಹಂತಕ್ಕೆ ಬಂದಿದೆ. ಆದರೆ ಭತ್ತ ಕಟಾವು ಮಾಡುವ ಯಂತ್ರಗಳಿಂದಾಗಿ ರೈತರು ಪರದಾಡುವ ಪರಿಸ್ಥಿತಿ ಎದುರಾಗಿದೆ.</p>.<p>ಕಳೆದ ಮೂರು ದಿನಗಳಿಂದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೂ ಕೆಲ ಕಡೆಗಳಲ್ಲಿ ತುಂತುರು ಮಳೆ ಬರುತ್ತಿದೆ. ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲವೇನೋ ಎಂಬ ಆತಂಕ ಮೂಡಿದೆ.</p>.<p>ಪ್ರತಿ ವರ್ಷ ಆಂಧ್ರಪ್ರದೇಶ ಮತ್ತು ತಮಿಳುನಾಡು ಸೇರಿ ನೆರೆ ರಾಜ್ಯಗಳಿಂದ ಭತ್ತ ಕಟಾವು ಯಂತ್ರಗಳನ್ನು ಸ್ಥಳೀಯರು ಗುತ್ತಿಗೆ ಆಧಾರದಲ್ಲಿ ತರಸಿಕೊಳ್ಳುತ್ತಿದ್ದರು. ಇದರಿಂದ ರೈತರಿಗೆ ಅನುಕೂಲವಾಗುತ್ತಿತ್ತು.</p>.<p>ಈ ವರ್ಷ ನೆರೆ ರಾಜ್ಯದ ಭತ್ತ ಕಟಾವು ಯಂತ್ರಗಳು ಬಂದಿಲ್ಲ. ಸ್ಥಳೀಯ ಯಂತ್ರಗಳಿಂದ ಕಟಾವು ಮಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ರೈತ ಶಿವಪುತ್ರಪ್ಪ ಕೆಂಗೇರಿ ಅಳಲು ತೋಡಿಕೊಂಡರು.</p>.<p>15 ದಿನಗಳ ಹಿಂದೆ ಅಕಾಲಿಕ ಮಳೆಯಿಂದಾಗಿ ಕಾಳು ತುಂಬಿ ಕಂಗೊಳಿಸುವಂತೆ ಬೆಳೆದು ನಿಂತಿದ್ದ ಭತ್ತದ ಬೆಳೆ ನೆಲಕ್ಕೆ ಬಿದ್ದಿದೆ. ಅದು ಕಟಾವಿಗೆ ಸಮಯ ತೆಗೆದುಕೊಳ್ಳುತ್ತಿದೆ. ಮೋಡ ಕವಿದ ವಾತಾವರಣ ಇರುವುದರಿಂದ ರೈತರಿಗೆ ತೊಂದರೆಯಾಗಿದೆ.</p>.<p>ಭತ್ತ ಕಟಾವು ಮಾಡಲು ಒಂದು ಗಂಟೆಗೆ ಸುಮಾರು ₹2,200 ರಿಂದ ₹2,400 ಕೊಡುತ್ತೇನೆ ಎಂದರೂ ಯಂತ್ರಗಳು ಸಿಗುತ್ತಿಲ್ಲ. ಒಂದು ವಾರ ಮುಂಚಿತವಾಗಿ ನಿಗದಿಪಡಿಸಬೇಕು ಎಂದು ತುರ್ವಿಹಾಳ ಪಟ್ಟಣದ ರೈತ ಸಿರಾಜ್ ಪಾಷಾ ದಳಪತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>