‘12 ವರ್ಷಗಳಿಂದ 5 (ಎ) ಕಾಲುವೆ ನಿರ್ಮಾಣ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಬಿ.ಎಸ್.ಯಡಿಯೂರಪ್ಪ ಪ್ರತಿಪಕ್ಷದ ಸ್ಥಾನದಲ್ಲಿದ್ದಾಗ ಹೋರಾಟ ಸಮಿತಿ ಮನವಿಗೆ ಸ್ಪಂದಿಸಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈಗ ಮುಖ್ಯಮಂತ್ರಿಯಾಗಿದ್ದಾರೆ. ಕೂಡಲೇ ಬೇಡಿಕೆ ಈಡೇರಿಸಬೇಕು’ ಎಂದು ಹೋರಾಟ ಸಮಿತಿ ಅಧ್ಯಕ್ಷ ಬಸವರಾಜಪ್ಪಗೌಡ ಹರ್ವಾಪೂರ ಒತ್ತಾಯಿಸಿದರು.