<p><strong>ರಾಯಚೂರು: </strong>ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಸಿಎಂ ರೈತ ವಿದ್ಯಾನಿಧಿ’ ಯೋಜನೆಯನ್ನು ಭಾನುವಾರ ಉದ್ಘಾಟಿಸಿದ ಕಾರ್ಯಕ್ರಮವನ್ನು ರೈತರು ಮತ್ತು ವಿದ್ಯಾರ್ಥಿಗಳು ನೇರವಾಗಿ ಆನ್ಲೈನ್ ಮೂಲಕ ವೀಕ್ಷಿಸುವುದಕ್ಕೆ ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಕೃಷಿ ಇಲಾಖೆಯಿಂದ ಭಾನುವಾರ ವ್ಯವಸ್ಥೆ ಮಾಡಲಾಗಿತ್ತು.</p>.<p>ಒಟ್ಟು 37 ರೈತ ಸಂಪರ್ಕ ಕೇಂದ್ರಗಳಲ್ಲಿ ಈ ನೇರ ಪ್ರಸಾರದ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿತ್ತು. ರಾಯಚೂರು, ದೇವಸೂಗೂರು, ಚಂದ್ರಬಂಡಾ, ಗಿಲ್ಲೇಸೂಗೂರು, ಯರಗೇರಾ, ಕಲ್ಮಲಾ ಹೋಬಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿದ್ದರು.</p>.<p>ಆಯಾ ತಾಲ್ಲೂಕು ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿಯೂ ಕಾರ್ಯಕ್ರಮದ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ರಾಯಚೂರು ತಾಲ್ಲಕು ಕಚೇರಿಯಲ್ಲಿ ರಾಂಪುರ, ಹೊಸೂರು, ವಡವಟ್ಟಿ, ಅಸ್ಕಿಹಾಳ ಸೇರಿ ಹಲವು ಗ್ರಾಮಗಳಿಂದ ಸುಮಾರು 200<br />ರೈತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಂಟಿ ಕೃಷಿ ನಿರ್ದೇಶಕ ನಯೀಮ್ ಹುಸೇನ್, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ದೀಪಾ ಎಲ್., ಎಸ್.ಎಂ. ಅಧಿಕಾರಿ ಶರಣಮ್ಮ, ನಾಗರೆಡ್ಡಿ, ಸಿದ್ದಾರೆಡ್ಡಿ, ರೆಹಮಾನ್, ಮೇಘನಾ, ಕೆ.ಎಸ್.ಎಸ್.ಸಿ.ಯ ಪ್ರಭು ತುರಾಯಿ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಸಿಎಂ ರೈತ ವಿದ್ಯಾನಿಧಿ’ ಯೋಜನೆಯನ್ನು ಭಾನುವಾರ ಉದ್ಘಾಟಿಸಿದ ಕಾರ್ಯಕ್ರಮವನ್ನು ರೈತರು ಮತ್ತು ವಿದ್ಯಾರ್ಥಿಗಳು ನೇರವಾಗಿ ಆನ್ಲೈನ್ ಮೂಲಕ ವೀಕ್ಷಿಸುವುದಕ್ಕೆ ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಕೃಷಿ ಇಲಾಖೆಯಿಂದ ಭಾನುವಾರ ವ್ಯವಸ್ಥೆ ಮಾಡಲಾಗಿತ್ತು.</p>.<p>ಒಟ್ಟು 37 ರೈತ ಸಂಪರ್ಕ ಕೇಂದ್ರಗಳಲ್ಲಿ ಈ ನೇರ ಪ್ರಸಾರದ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿತ್ತು. ರಾಯಚೂರು, ದೇವಸೂಗೂರು, ಚಂದ್ರಬಂಡಾ, ಗಿಲ್ಲೇಸೂಗೂರು, ಯರಗೇರಾ, ಕಲ್ಮಲಾ ಹೋಬಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿದ್ದರು.</p>.<p>ಆಯಾ ತಾಲ್ಲೂಕು ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿಯೂ ಕಾರ್ಯಕ್ರಮದ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ರಾಯಚೂರು ತಾಲ್ಲಕು ಕಚೇರಿಯಲ್ಲಿ ರಾಂಪುರ, ಹೊಸೂರು, ವಡವಟ್ಟಿ, ಅಸ್ಕಿಹಾಳ ಸೇರಿ ಹಲವು ಗ್ರಾಮಗಳಿಂದ ಸುಮಾರು 200<br />ರೈತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಂಟಿ ಕೃಷಿ ನಿರ್ದೇಶಕ ನಯೀಮ್ ಹುಸೇನ್, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ದೀಪಾ ಎಲ್., ಎಸ್.ಎಂ. ಅಧಿಕಾರಿ ಶರಣಮ್ಮ, ನಾಗರೆಡ್ಡಿ, ಸಿದ್ದಾರೆಡ್ಡಿ, ರೆಹಮಾನ್, ಮೇಘನಾ, ಕೆ.ಎಸ್.ಎಸ್.ಸಿ.ಯ ಪ್ರಭು ತುರಾಯಿ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>