ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಯರಜಂತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಗಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಮೋನಮ್ಮ (14) ಕೊಲೆಯಾದ ನತದೃಷ್ಟೆ. ಆರೋಪಿ ತಿಮ್ಮಯ್ಯ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮನೆ ಎದುರು ಪಾತ್ರೆ ತೊಳೆಯುತ್ತ ಕುಳಿತ್ತಿದ್ದ ಮಗಳ ಕುತ್ತಿಗೆಗೆ ಕೊಡಲಿಯಿಂದ ಕೊಚ್ಚಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.