<p><strong>ಜಾಲಹಳ್ಳಿ:</strong> ಸಮೀಪದ ಚಿಂಚೋಡಿ ಗ್ರಾಮದಲ್ಲಿ ಸಮರ್ಪಕ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳೇ ಚರಂಡಿಗಳಾಗಿ ಪರಿವರ್ತಿತವಾಗಿವೆ. ಇದರಿಂದ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ.</p>.<p>ಗ್ರಾಮದಲ್ಲಿಯೇ ಗ್ರಾಮ ಪಂಚಾಯಿತಿ ಕಚೇರಿ ಇದೆ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮನೆಗಳಿವೆ. ಆದರೆ ಸೂಕ್ತ ಚರಂಡಿ ಇಲ್ಲದಿರುವುದರಿಂದ ಹೊಲಸು ನೀರು ರಸ್ತೆ ಮೇಲೆಯೇ ಹರಿಯುತ್ತದೆ. ಇದರಿಂದ ಎಲ್ಲೆಡೆ ದುರ್ವಾಸನೆ ಬೀರುತ್ತದೆ.</p>.<p>ಮಳೆಗಾಲ ಪ್ರಾರಂಭಗೊಂಡಿರುವುದರಿಂದ ಅವೈಜ್ಞಾನಿಕವಾಗಿ ನಿರ್ಮಿಸಿರುವ ಚರಂಡಿಗಳು ತುಂಬಿ ಹರಿಯುತ್ತಿವೆ. ಇದರಿಂದ ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಈ ಕುರಿತು ಗ್ರಾ.ಪಂ ಅಧ್ಯಕ್ಷ, ಪಿಡಿಒಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು <a>ಗ್ರಾ.ಪಂ</a> ಸದಸ್ಯ ತಿಮ್ಮಣ್ಣ ಪೊಲೀಸ್ ಪಾಟೀಲ ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p>ಗ್ರಾಮದಲ್ಲಿ ₹15 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಅದರೆ, ಒಂದು ವರ್ಷದಿಂದ ಸ್ಥಗಿತಗೊಂಡಿದೆ. ದುರಸ್ತಿಗೊಳಿಸಲು ಪಿಡಿಒ ಹಿಂದೇಟು ಹಾಕುತ್ತಿದ್ದಾರೆ ಎಂದು ಜನ ದೂರುತ್ತಾರೆ.</p>.<p>ಗ್ರಾಮದಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಇದೆ. ಇವುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿರುವ ಕಾರಣ ರೋಗಿಗಳು ಮತ್ತು ಶಾಲಾ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಪಿಡಿಒ ಅವರು ಬರುವುದಿಲ್ಲ ಎಂದು ಗ್ರಾಮದ ನಿವಾಸಿ ಅಮರೇಶ ನಗನೂರು ಹೇಳಿದರು.</p>.<p>ಪಂಚಾಯಿತಿ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಹೊಲಸು ನೀರು ಹಾಗೂ ಕಸ ಕಡ್ಡಿಯನ್ನು ಬೇರೆಡೆಗೆ ಸಾಗಿಸುವ ವ್ಯವಸ್ಥೆ ಮಾಡಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.</p>.<p>ಮಾಹಿತಿ ಪಡೆಯಲು ‘ಪ್ರಜಾವಾಣಿ’ಯು ಪಿಡಿಒ ಚನ್ನಬಸವ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ:</strong> ಸಮೀಪದ ಚಿಂಚೋಡಿ ಗ್ರಾಮದಲ್ಲಿ ಸಮರ್ಪಕ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳೇ ಚರಂಡಿಗಳಾಗಿ ಪರಿವರ್ತಿತವಾಗಿವೆ. ಇದರಿಂದ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ.</p>.<p>ಗ್ರಾಮದಲ್ಲಿಯೇ ಗ್ರಾಮ ಪಂಚಾಯಿತಿ ಕಚೇರಿ ಇದೆ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮನೆಗಳಿವೆ. ಆದರೆ ಸೂಕ್ತ ಚರಂಡಿ ಇಲ್ಲದಿರುವುದರಿಂದ ಹೊಲಸು ನೀರು ರಸ್ತೆ ಮೇಲೆಯೇ ಹರಿಯುತ್ತದೆ. ಇದರಿಂದ ಎಲ್ಲೆಡೆ ದುರ್ವಾಸನೆ ಬೀರುತ್ತದೆ.</p>.<p>ಮಳೆಗಾಲ ಪ್ರಾರಂಭಗೊಂಡಿರುವುದರಿಂದ ಅವೈಜ್ಞಾನಿಕವಾಗಿ ನಿರ್ಮಿಸಿರುವ ಚರಂಡಿಗಳು ತುಂಬಿ ಹರಿಯುತ್ತಿವೆ. ಇದರಿಂದ ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಈ ಕುರಿತು ಗ್ರಾ.ಪಂ ಅಧ್ಯಕ್ಷ, ಪಿಡಿಒಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು <a>ಗ್ರಾ.ಪಂ</a> ಸದಸ್ಯ ತಿಮ್ಮಣ್ಣ ಪೊಲೀಸ್ ಪಾಟೀಲ ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p>ಗ್ರಾಮದಲ್ಲಿ ₹15 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಅದರೆ, ಒಂದು ವರ್ಷದಿಂದ ಸ್ಥಗಿತಗೊಂಡಿದೆ. ದುರಸ್ತಿಗೊಳಿಸಲು ಪಿಡಿಒ ಹಿಂದೇಟು ಹಾಕುತ್ತಿದ್ದಾರೆ ಎಂದು ಜನ ದೂರುತ್ತಾರೆ.</p>.<p>ಗ್ರಾಮದಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಇದೆ. ಇವುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿರುವ ಕಾರಣ ರೋಗಿಗಳು ಮತ್ತು ಶಾಲಾ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಪಿಡಿಒ ಅವರು ಬರುವುದಿಲ್ಲ ಎಂದು ಗ್ರಾಮದ ನಿವಾಸಿ ಅಮರೇಶ ನಗನೂರು ಹೇಳಿದರು.</p>.<p>ಪಂಚಾಯಿತಿ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಹೊಲಸು ನೀರು ಹಾಗೂ ಕಸ ಕಡ್ಡಿಯನ್ನು ಬೇರೆಡೆಗೆ ಸಾಗಿಸುವ ವ್ಯವಸ್ಥೆ ಮಾಡಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.</p>.<p>ಮಾಹಿತಿ ಪಡೆಯಲು ‘ಪ್ರಜಾವಾಣಿ’ಯು ಪಿಡಿಒ ಚನ್ನಬಸವ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>