<p><strong>ರಾಯಚೂರು</strong>: ‘ಸಾರ್ವಜನಿಕ ಸ್ಥಳ, ಕೆರೆಯಲ್ಲಿ ಕಸ ಎಸೆಯುವುದನ್ನು ನಿಲ್ಲಿಸದಿದ್ದರೆ ಹಾಗೂ ಸರಿಯಾಗಿ ತ್ಯಾಜ್ಯ ವಿಲೇವಾರಿ ಮಾಡದಿದ್ದರೆ ದಂಡ ವಿಧಿಸುವುದು ಅನಿವಾರ್ಯವಾಗಲಿದೆ’ ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಎಚ್ಚರಿಕೆ ನೀಡಿದ್ದಾರೆ.</p>.<p>‘ಸರ್ಕಾರದ ಸೂಚನೆಯಂತೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ನಿಗದಿಪಡಿಸಿದ ಶುಲ್ಕ ಹಾಗೂ ದಂಡ ಅಂಗೀಕರಿಸಲಾಗುವುದು’ ಎಂದು ಹೇಳಿದ್ದಾರೆ.</p>.<p>‘ಸಾರ್ವಜನಿಕರು ತಮ್ಮ ಮನೆ, ಅಂಗಡಿ, ಮಳಿಗೆಗಳಲ್ಲೇ ತ್ಯಾಜ್ಯ ವಿಲೇವಾರಿ ಮಾಡಿ ಸಂಗ್ರಹ ವಾಹನಗಳಿಗೆ ಕೊಡಬೇಕು. ರಸ್ತೆ, ಕಂದಕ ಅಥವಾ ರಾಜಕಾಲುವೆಗಳಲ್ಲಿ ಕಸ ಹಾಕುವುದು ಕಂಡುಬಂದರೆ ₹ 500 ದಂಡ ವಿಧಿಸಲಾಗುವುದು’ ಎಂದು ತಿಳಿಸಿದ್ದಾರೆ.</p>.<p>‘ವಾಣಿಜ್ಯ ಆಸ್ತಿಗಳು, ಬಾರ್ಗಳು, ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳವರು ರಸ್ತೆಗಳು, ಉದ್ಯಾನ, ಜಲಮೂಲಗಳಲ್ಲಿ ಕಸ ಎಸೆಯುವುದು, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯವನ್ನು ಸುಡುವುದು ಕಂಡುಬಂದರೆ ₹1,500 ದಂಡ ವಿಧಿಸಲಾಗುವುದು. ರಾಯಚೂರು ನಗರವನ್ನು ಸುಂದರ ಮತ್ತು ಆರೋಗ್ಯಕರ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಸಾರ್ವಜನಿಕ ಸ್ಥಳ, ಕೆರೆಯಲ್ಲಿ ಕಸ ಎಸೆಯುವುದನ್ನು ನಿಲ್ಲಿಸದಿದ್ದರೆ ಹಾಗೂ ಸರಿಯಾಗಿ ತ್ಯಾಜ್ಯ ವಿಲೇವಾರಿ ಮಾಡದಿದ್ದರೆ ದಂಡ ವಿಧಿಸುವುದು ಅನಿವಾರ್ಯವಾಗಲಿದೆ’ ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಎಚ್ಚರಿಕೆ ನೀಡಿದ್ದಾರೆ.</p>.<p>‘ಸರ್ಕಾರದ ಸೂಚನೆಯಂತೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ನಿಗದಿಪಡಿಸಿದ ಶುಲ್ಕ ಹಾಗೂ ದಂಡ ಅಂಗೀಕರಿಸಲಾಗುವುದು’ ಎಂದು ಹೇಳಿದ್ದಾರೆ.</p>.<p>‘ಸಾರ್ವಜನಿಕರು ತಮ್ಮ ಮನೆ, ಅಂಗಡಿ, ಮಳಿಗೆಗಳಲ್ಲೇ ತ್ಯಾಜ್ಯ ವಿಲೇವಾರಿ ಮಾಡಿ ಸಂಗ್ರಹ ವಾಹನಗಳಿಗೆ ಕೊಡಬೇಕು. ರಸ್ತೆ, ಕಂದಕ ಅಥವಾ ರಾಜಕಾಲುವೆಗಳಲ್ಲಿ ಕಸ ಹಾಕುವುದು ಕಂಡುಬಂದರೆ ₹ 500 ದಂಡ ವಿಧಿಸಲಾಗುವುದು’ ಎಂದು ತಿಳಿಸಿದ್ದಾರೆ.</p>.<p>‘ವಾಣಿಜ್ಯ ಆಸ್ತಿಗಳು, ಬಾರ್ಗಳು, ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳವರು ರಸ್ತೆಗಳು, ಉದ್ಯಾನ, ಜಲಮೂಲಗಳಲ್ಲಿ ಕಸ ಎಸೆಯುವುದು, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯವನ್ನು ಸುಡುವುದು ಕಂಡುಬಂದರೆ ₹1,500 ದಂಡ ವಿಧಿಸಲಾಗುವುದು. ರಾಯಚೂರು ನಗರವನ್ನು ಸುಂದರ ಮತ್ತು ಆರೋಗ್ಯಕರ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>