ಹನುಮಂತಮ್ಮ ಎಂಬ ರೈತರಿಗೆ ಸೇರಿದ ಸರ್ವೆ ನಂ68/2 ರ 7ಎಕರೆ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ರಾಶಿಗೆ ಬೆಂಕಿ ಹಚ್ಚಲಾಗಿದೆ. ಸುಮಾರು ₹ 4.5 ಲಕ್ಷ ಮೌಲ್ಯದ ಜೋಳದ ತೆನೆಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಗ್ರಾಮ ಲೆಕ್ಕಾಧಿಕಾರಿ ನರಸಪ್ಪ ಹಾಗೂ ಸುರೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.