ಶೀಲಹಳ್ಳಿಯಲ್ಲಿ ವಾಸ್ತವ್ಯ ಮಾಡಿರುವ ಕುಟುಂಬಸ್ಥರು ಮಕ್ಕಳು, ಮಹಿಳೆಯರು, ವಯೋವೃದ್ಧರು ನಡುಗಡ್ಡೆ ಸಂಪರ್ಕಿಸುವ ರಸ್ತೆಯ ಟಿಸಿಲೊಡೆದ ಕೃಷ್ಣಾ ನದಿ ತಟದಲ್ಲಿ ಕಾದು ಕುಳಿತಿದ್ದಾರೆ. ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದರು ಕೂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಬಂದಿದ್ದಾರೆ. ನಂತರದಲ್ಲಿ ಸುರಕ್ಷಿತವಾಗಿ ಕರೆತರಲು ಪ್ರಯತ್ನಿಸೋಣ ಎಂದು ಹಾರಿಕೆ ಉತ್ತರ ನೀಡುತ್ತಿರುವ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.