ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತವದಗಡ್ಡಿ: ನಡುಗಡ್ಡೆಯಲ್ಲಿ ಸಿಲುಕಿದವರ ರಕ್ಷಣೆಗೆ ಸಾಹಸ

Last Updated 25 ಜುಲೈ 2021, 4:35 IST
ಅಕ್ಷರ ಗಾತ್ರ

ಲಿಂಗಸುಗೂರು: ತಾಲ್ಲೂಕಿನ ಕೃಷ್ಣಾ ನದಿಯ ನಡುಗಡ್ಡೆ ಪ್ರದೇಶ ತವದಗಡ್ಡಿಯಲ್ಲಿ ಪಂಪ್‌ಸೆಟ್‌ ಹಾಗೂ ಜಾನುವಾರು ರಕ್ಷಣೆಗೆ ತೆರಳಿದ ಮೂವರು ಮರಳಿ ಬರಲಾಗದೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಸಂಬಂಧಿಗಳು ಈಜುಗಾಯಿ, ಈಜುಗಾರರ ಸಹಕಾರದಿಂದ ಅವರನ್ನು ಕರೆತರಲು ಪ್ರಯತ್ನಿಸಿದರು. ಆದರೆ ಪ್ರಯತ್ನ ಸಫಲವಾಗಲಿಲ್ಲ.

ಶನಿವಾರ ಬೆಳಗಿನ ಜಾವ ತೆರಳಿದ ನಿರುಪಾದಿ, ಹುಲಗಪ್ಪ ಹಾಗೂ ದುರುಗಪ್ಪ ಅವರಿಗೆ ನಡುಗಡ್ಡೆಯಿಂದ ವಾಪಸ್ ಬರಲಾಗುತ್ತಿಲ್ಲ. ಕುಟುಂಬಸ್ಥರ ಜತೆಗೆ ನಿರಂತರವಾಗಿ ಸಂಪರ್ಕ ಹೊಂದಿರುವ ಅವರು ನೀರು ಹೆಚ್ಚಿನ ಪ್ರಮಾಣದಲ್ಲಿದ್ದು ಸೆಳುವಿಗೆ ಈಜಲು ಆಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಶೀಲಹಳ್ಳಿಯಲ್ಲಿ ವಾಸ್ತವ್ಯ ಮಾಡಿರುವ ಕುಟುಂಬಸ್ಥರು ಮಕ್ಕಳು, ಮಹಿಳೆಯರು, ವಯೋವೃದ್ಧರು ನಡುಗಡ್ಡೆ ಸಂಪರ್ಕಿಸುವ ರಸ್ತೆಯ ಟಿಸಿಲೊಡೆದ ಕೃಷ್ಣಾ ನದಿ ತಟದಲ್ಲಿ ಕಾದು ಕುಳಿತಿದ್ದಾರೆ. ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದರು ಕೂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಬಂದಿದ್ದಾರೆ. ನಂತರದಲ್ಲಿ ಸುರಕ್ಷಿತವಾಗಿ ಕರೆತರಲು ಪ್ರಯತ್ನಿಸೋಣ ಎಂದು ಹಾರಿಕೆ ಉತ್ತರ ನೀಡುತ್ತಿರುವ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ತವದಗಡ್ಡಿಯಲ್ಲಿ ವಾಸ ಮಾಡುತ್ತಿದ್ದೆವು. ಬಹುತೇಕರು ಶುಕ್ರವಾರ ಮಧ್ಯಾಹ್ನ ಪ್ರವಾಹ ಭೀತಿಯಿಂದ ಹೊರ ಬಂದಿದ್ದೇವೆ. ಕೆಲವರು ಪಂಪಸೆಟ್‍, ಜಾನುವಾರು ಸುರಕ್ಷತೆಗಾಗಿ ಹೋಗಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ತಹಶೀಲ್ದಾರ್ ಅವರ ಗಮನಕ್ಕೆ ತಂದರೂ ಸ್ಪಂದನೆ ದೊರೆತಿಲ್ಲ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡ ಹನುಮಂತಪ್ಪ ಶೀಲಹಳ್ಳಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT