ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಶೇ 70 ರಷ್ಟು ಹಾರುಬೂದಿ ವಿಲೇವಾರಿಗೆ ಯಾವುದೇ ಸಮಸ್ಯೆಯಿಲ್ಲ. ಶೇ 30 ರಷ್ಟು ತೊಯ್ದ ಹಾರುಬೂದಿಗೂ ಸಾಕಷ್ಟು ಬೇಡಿಕೆ ಇದ್ದು, ಸ್ಥಳೀಯ ಕೈಗಾರಿಕೆಗಳು ಸಮರ್ಪಕವಾಗಿ ಬಳಸಿಕೊಳ್ಳುವ ತಂತ್ರಜ್ಞಾನ ಅಳವಡಿಸಿಕೊಂಡಿರುವುದನ್ನು ಪರಿಶೀಲಿಸಿದ ಬಳಿಕ ಹಂಚಿಕೆ ಮಾಡಲಾಗುವುದು. ಹಾರುಬೂದಿ ಬಳಸಿಕೊಳ್ಳುವ ತಂತ್ರಜ್ಞಾನ ಇಲ್ಲದಿದ್ದರೆ ಅದನ್ನು ಸಿಮೆಂಟ್ ಕಂಪೆನಿಗಳಿಗೆ ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.