<p><strong>ಸಿಂಧನೂರು:</strong> ‘ನಗರ ಪ್ರದೇಶದಲ್ಲಿ ಜನಪದ ಕಲೆಗಳು ಕಾಣದಾಗಿವೆ. ಗ್ರಾಮೀಣ ಪ್ರದೇಶದಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಜೀವಂತವಾಗಿ ಉಳಿದಿದೆ’ ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ವತಿಯಿಂದ ತುರ್ವಿಹಾಳ ಪಟ್ಟಣದಲ್ಲಿ ನಡೆದ ‘ಸಾಂಸ್ಕೃತಿಕ ಸೌರಭ-2025’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಹಳ್ಳಿಗಳ ಜೀವನ ಶೈಲಿ, ಸಂಪ್ರದಾಯ ಮತ್ತು ಜನಪದ ಪರಂಪರೆಗಳು ನಮ್ಮ ನಾಡಿನ ನಿಜವಾದ ಸಾಂಸ್ಕೃತಿಕ ಕುರುಹುಗಳಾಗಿವೆ. ಈ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪಸರಿಸುವುದು ನಾಗರಿಕರ ಜವಾಬ್ದಾರಿಯಾಗಿದೆ’ ಎಂದರು.</p>.<p>‘ನಗರೀಕರಣದ ಅಲೆಯಲ್ಲಿ ನಮ್ಮ ಮೂಲ ಸಂಸ್ಕೃತಿ ಮರೆಯಾಗದಂತೆ ನೋಡಿಕೊಳ್ಳಬೇಕು. ಜಾನಪದ ಕಲೆಗಳು ಕೇವಲ ಮನರಂಜನೆಗೆ ಸೀಮಿತವಲ್ಲ. ಸಾಮಾಜಿಕ ಬದುಕಿನ ಪ್ರತಿಬಿಂಬವೂ ಆಗಿವೆ. ಸರ್ಕಾರ ಇಂಥ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕಲಾವಿದರಿಗೆ ವೇದಿಕೆ ಒದಗಿಸುತ್ತಿದೆ’ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಾಪುಗೌಡ ದೇವರಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ತಹಶೀಲ್ದಾರ್ ಮಂಜುನಾಥ ಬೋಗಾವತಿ, ಪುರಸಭೆ ಸದಸ್ಯರು, ಕಲಾವಿದರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮದಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿ ಸಂಸ್ಕೃತಿಯ ವೈವಿಧ್ಯತೆಯನ್ನು ಪ್ರದರ್ಶಿಸಿದವು. ಜಾನಪದ ಕಲಾವಿದರು ಹಳ್ಳಿಯ ಜೀವನ ಸೊಗಡನ್ನು ವೇದಿಕೆಗೆ ತಂದು ಪ್ರೇಕ್ಷಕರ ಮನಗೆದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ‘ನಗರ ಪ್ರದೇಶದಲ್ಲಿ ಜನಪದ ಕಲೆಗಳು ಕಾಣದಾಗಿವೆ. ಗ್ರಾಮೀಣ ಪ್ರದೇಶದಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಜೀವಂತವಾಗಿ ಉಳಿದಿದೆ’ ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ವತಿಯಿಂದ ತುರ್ವಿಹಾಳ ಪಟ್ಟಣದಲ್ಲಿ ನಡೆದ ‘ಸಾಂಸ್ಕೃತಿಕ ಸೌರಭ-2025’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಹಳ್ಳಿಗಳ ಜೀವನ ಶೈಲಿ, ಸಂಪ್ರದಾಯ ಮತ್ತು ಜನಪದ ಪರಂಪರೆಗಳು ನಮ್ಮ ನಾಡಿನ ನಿಜವಾದ ಸಾಂಸ್ಕೃತಿಕ ಕುರುಹುಗಳಾಗಿವೆ. ಈ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪಸರಿಸುವುದು ನಾಗರಿಕರ ಜವಾಬ್ದಾರಿಯಾಗಿದೆ’ ಎಂದರು.</p>.<p>‘ನಗರೀಕರಣದ ಅಲೆಯಲ್ಲಿ ನಮ್ಮ ಮೂಲ ಸಂಸ್ಕೃತಿ ಮರೆಯಾಗದಂತೆ ನೋಡಿಕೊಳ್ಳಬೇಕು. ಜಾನಪದ ಕಲೆಗಳು ಕೇವಲ ಮನರಂಜನೆಗೆ ಸೀಮಿತವಲ್ಲ. ಸಾಮಾಜಿಕ ಬದುಕಿನ ಪ್ರತಿಬಿಂಬವೂ ಆಗಿವೆ. ಸರ್ಕಾರ ಇಂಥ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕಲಾವಿದರಿಗೆ ವೇದಿಕೆ ಒದಗಿಸುತ್ತಿದೆ’ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಾಪುಗೌಡ ದೇವರಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ತಹಶೀಲ್ದಾರ್ ಮಂಜುನಾಥ ಬೋಗಾವತಿ, ಪುರಸಭೆ ಸದಸ್ಯರು, ಕಲಾವಿದರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮದಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿ ಸಂಸ್ಕೃತಿಯ ವೈವಿಧ್ಯತೆಯನ್ನು ಪ್ರದರ್ಶಿಸಿದವು. ಜಾನಪದ ಕಲಾವಿದರು ಹಳ್ಳಿಯ ಜೀವನ ಸೊಗಡನ್ನು ವೇದಿಕೆಗೆ ತಂದು ಪ್ರೇಕ್ಷಕರ ಮನಗೆದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>