ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಮಾತನಾಡಿ, ಆಟೋ ಚಾಲಕರು ತಪ್ಪದೇ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ನಿಯಮಗಳನ್ನು ಉಲ್ಲಂಘಿಸಿ ಜನರಿಗೆ ತೊಂದರೆ ಮಾಡಬಾರದು. ಮದ್ಯಪಾನ ಮಾಡಿ ವಾಹನಗಳನ್ನು ಚಲಾವಣೆ ಮಾಡಲೇಬಾರದು. ಇಲ್ಲದಿದ್ದರೆ ಪ್ರಾಣಕ್ಕೆ ಮುಪ್ಪು ತಂದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.