<p><strong>ಮಸ್ಕಿ:</strong> ರಸ್ತೆ ಅಪಘಾತ ಸೇರಿದಂತೆ ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಯಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಸರ್ಕಲ್ ಇನ್ಸ್ಪೆಕ್ಟರ್ ಸಂಜೀವಕುಮಾರ ಬಳಿಗಾರ ಕರೆ ನೀಡಿದರು.</p>.<p>ಪಟ್ಟಣದ ಬಸವವೃತ್ತದ ಬಳಿ ಅಭಿನಂದನ್ ಶಿಕ್ಷಣ ಸಂಸ್ಥೆ ಭಾನುವಾರ ಹಮ್ಮಿಕೊಂಡಿದ್ದ ಸಂಡೆಫಾರ್ ಸೋಸಿಯಲ್ ವರ್ಕ್ ಅಭಿಯಾನ ನಿಮಿತ್ತ ರಸ್ತೆಯ ಹಂಪ್ಸ್ಗಳಿಗೆ ಬಣ್ಣ ಹಚ್ಚುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಂಚಾರದ ನಿಯಮ ಗೊತ್ತಿಲ್ಲದ ಕಾರಣ ಇತ್ತೀಚೆಗೆ ಅಪಘಾತಗಳು ಹೆಚ್ಚಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಂಘ ಸಂಸ್ಥೆಗಳು ಸಾರ್ವಜನಿಕರಿಗೆ ರಸ್ತೆ ನಿಯಮಗಳನ್ನು ತಿಳಿಸುವ ಮೂಲಕ ಅಪಘಾತ ಪ್ರಕರಣಗಳು ನಡೆಯದಂತೆ ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಪಟ್ಟಣದ ಅಭಿನಂದನ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ 28 ವಾರಗಳಿಂದ ಸಂಡೆ ಫಾರ್ ಸೋಸಿಯಲ್ ವರ್ಕ್ ಹೆಸರಿನಲ್ಲಿ ಪ್ರತಿವಾರ ಒಂದೊಂದು ಸಾಮಾಜಿಕ ಕೆಲಸ ಮಾಡುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ. ಈ ಭಾನುವಾರ ರಸ್ತೆಯ ಹಂಪ್ಸ್ಗಳಿಗೆ ಬಣ್ಣ ಹಚುವ ಮೂಲಕ ರಸ್ತೆ ಸುರಕ್ಷಾ ಅಭಿಯಾನ ನಡೆಸಿರುವುದು ಶ್ಲಾಘನೀಯ ಎಂದರು.</p>.<p>ಡಾ. ಮಲ್ಲಿಕಾರ್ಜುನ ಇತ್ಲಿ, ಗಾಂಧಿ ಕುಟಿರದ ಮುಖ್ಯಸ್ಥ ಶಿವಪ್ರಸಾದ ಕ್ಯಾತನಟ್ಟಿ, ಪತ್ರಕರ್ತರ ಸಂಘದ ಪ್ರಕಾಶ ಮಸ್ಕಿ, ಅಭಿನಂದನ್ ಸಂಸ್ಥೆಯ ಅಧ್ಯಕ್ಷ ರಾಮಣ್ಣ ಹಂಪರಗುಂದಿ, ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ರಸ್ತೆ ಅಪಘಾತ ಸೇರಿದಂತೆ ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಯಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಸರ್ಕಲ್ ಇನ್ಸ್ಪೆಕ್ಟರ್ ಸಂಜೀವಕುಮಾರ ಬಳಿಗಾರ ಕರೆ ನೀಡಿದರು.</p>.<p>ಪಟ್ಟಣದ ಬಸವವೃತ್ತದ ಬಳಿ ಅಭಿನಂದನ್ ಶಿಕ್ಷಣ ಸಂಸ್ಥೆ ಭಾನುವಾರ ಹಮ್ಮಿಕೊಂಡಿದ್ದ ಸಂಡೆಫಾರ್ ಸೋಸಿಯಲ್ ವರ್ಕ್ ಅಭಿಯಾನ ನಿಮಿತ್ತ ರಸ್ತೆಯ ಹಂಪ್ಸ್ಗಳಿಗೆ ಬಣ್ಣ ಹಚ್ಚುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಂಚಾರದ ನಿಯಮ ಗೊತ್ತಿಲ್ಲದ ಕಾರಣ ಇತ್ತೀಚೆಗೆ ಅಪಘಾತಗಳು ಹೆಚ್ಚಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಂಘ ಸಂಸ್ಥೆಗಳು ಸಾರ್ವಜನಿಕರಿಗೆ ರಸ್ತೆ ನಿಯಮಗಳನ್ನು ತಿಳಿಸುವ ಮೂಲಕ ಅಪಘಾತ ಪ್ರಕರಣಗಳು ನಡೆಯದಂತೆ ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಪಟ್ಟಣದ ಅಭಿನಂದನ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ 28 ವಾರಗಳಿಂದ ಸಂಡೆ ಫಾರ್ ಸೋಸಿಯಲ್ ವರ್ಕ್ ಹೆಸರಿನಲ್ಲಿ ಪ್ರತಿವಾರ ಒಂದೊಂದು ಸಾಮಾಜಿಕ ಕೆಲಸ ಮಾಡುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ. ಈ ಭಾನುವಾರ ರಸ್ತೆಯ ಹಂಪ್ಸ್ಗಳಿಗೆ ಬಣ್ಣ ಹಚುವ ಮೂಲಕ ರಸ್ತೆ ಸುರಕ್ಷಾ ಅಭಿಯಾನ ನಡೆಸಿರುವುದು ಶ್ಲಾಘನೀಯ ಎಂದರು.</p>.<p>ಡಾ. ಮಲ್ಲಿಕಾರ್ಜುನ ಇತ್ಲಿ, ಗಾಂಧಿ ಕುಟಿರದ ಮುಖ್ಯಸ್ಥ ಶಿವಪ್ರಸಾದ ಕ್ಯಾತನಟ್ಟಿ, ಪತ್ರಕರ್ತರ ಸಂಘದ ಪ್ರಕಾಶ ಮಸ್ಕಿ, ಅಭಿನಂದನ್ ಸಂಸ್ಥೆಯ ಅಧ್ಯಕ್ಷ ರಾಮಣ್ಣ ಹಂಪರಗುಂದಿ, ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>