ಆನಂತರ ಮಾತನಾಡಿದ ಅವರುಉ, ಕೋವಿಡ್–19 ಸಂದರ್ಭದಲ್ಲೂ ನಗರದ ಸ್ವಚ್ಛತಾ ಕಾರ್ಯ ಮಾಡಿರುವ ಪೌರಕಾರ್ಮಿಕರಿಗೆ ಚಿರಋಣಿಯಾಗಿದ್ದೇನೆ. ಪೌರ ಕಾರ್ಮಿಕರಿಗೆ ₹380 ಕೋಟಿ ವೆಚ್ಚದಲ್ಲಿ 5 ಸಾವಿರ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ದೊರಕಿದೆ. ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸುವುದು ಸೇರಿದಂತೆ ಸರ್ಕಾರದಿಂದ ವಿವಿಧ ಯೋಜನೆಗಳನ್ನು ಪಡೆಯುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.