<p><strong>ಮಾನ್ವಿ:</strong> ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ರಾಜ್ಯ ಹೆದ್ದಾರಿಯ ವಿಭಜಕದ (ಡಿವೈಡರ್) ಮೇಲೆ ನೆಡಲಾಗಿರುವ ಕೊನೊಕಾರ್ಪಸ್ ತಳಿಯ ಗಿಡಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಜನಸೇವಾ ಫೌಂಡೇಶನ್ ಪದಾಧಿಕಾರಿಗಳು ಶನಿವಾರ ಪಟ್ಟಣದಲ್ಲಿ ಶಿರಸ್ತೇದಾರ ವಿನಾಯಕರಾವ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಜಿಲ್ಲೆಯಾದ್ಯಂತ ನಗರ, ಪಟ್ಟಣಗಳ ರಾಜ್ಯ ಹೆದ್ದಾರಿಯ ವಿಭಜಕಗಳ ಮೇಲೆ ಹಾಗೂ ಸರ್ಕಾರಿ ಇಲಾಖೆಗಳ ಆವರಣಗಳಲ್ಲಿ ಕೊನೊಕಾರ್ಪಸ್ ತಳಿಯ ಗಿಡಗಳನ್ನು ನೆಡಲಾಗಿದೆ. ಕೊನೊಕಾರ್ಪಸ್ ಗಿಡವು ವಿಷಕಾರಿ ಆಮ್ಲಜನಕವನ್ನು ಬಿಡುಗಡೆ ಮಾಡುತ್ತಿದ್ದು, ಇದರ ಆಮ್ಲಜನಕವನ್ನು ಸೇವಿಸುವುದರಿಂದ ಉಸಿರಾಟದ ತೊಂದರೆ ಹಾಗೂ ಹೃದಯಾಘಾತಕ್ಕೆ ಎಡೆಮಾಡಿಕೊಡುತ್ತದೆ. ಈ ಗಿಡಗಳ ಬೀಜಗಳು ನೆಲದ ಮೇಲೆ ಬಿದ್ದು ವೇಗವಾಗಿ ಬೆಳೆಯುತ್ತದೆ. ಗುಜರಾತ್ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈ ಗಿಡಗಳನ್ನು ನೆಡಲು ನಿಷೇಧಿಸಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಸರ್ಕಾರಿ ಕಚೇರಿ ಆವರಣಗಳಲ್ಲಿ ಈ ಗಿಡಗಳು ಯತೇಚ್ಛವಾಗಿ ಅರಣ್ಯ ಇಲಾಖೆಯಿಂದ ಬೆಳೆಸಲಾಗಿದೆ. ಕೊನೊಕಾರ್ಪಸ್ ತಳಿಯ ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಲಾಯಿತು.</p>.<p>ಜನಸೇವಾ ಫೌಂಡೇಶನ್ ಅಧ್ಯಕ್ಷ ಜಾವೀದ್ ಖಾನ್, ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ರಾಜ್ಯ ಹೆದ್ದಾರಿಯ ವಿಭಜಕದ (ಡಿವೈಡರ್) ಮೇಲೆ ನೆಡಲಾಗಿರುವ ಕೊನೊಕಾರ್ಪಸ್ ತಳಿಯ ಗಿಡಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಜನಸೇವಾ ಫೌಂಡೇಶನ್ ಪದಾಧಿಕಾರಿಗಳು ಶನಿವಾರ ಪಟ್ಟಣದಲ್ಲಿ ಶಿರಸ್ತೇದಾರ ವಿನಾಯಕರಾವ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಜಿಲ್ಲೆಯಾದ್ಯಂತ ನಗರ, ಪಟ್ಟಣಗಳ ರಾಜ್ಯ ಹೆದ್ದಾರಿಯ ವಿಭಜಕಗಳ ಮೇಲೆ ಹಾಗೂ ಸರ್ಕಾರಿ ಇಲಾಖೆಗಳ ಆವರಣಗಳಲ್ಲಿ ಕೊನೊಕಾರ್ಪಸ್ ತಳಿಯ ಗಿಡಗಳನ್ನು ನೆಡಲಾಗಿದೆ. ಕೊನೊಕಾರ್ಪಸ್ ಗಿಡವು ವಿಷಕಾರಿ ಆಮ್ಲಜನಕವನ್ನು ಬಿಡುಗಡೆ ಮಾಡುತ್ತಿದ್ದು, ಇದರ ಆಮ್ಲಜನಕವನ್ನು ಸೇವಿಸುವುದರಿಂದ ಉಸಿರಾಟದ ತೊಂದರೆ ಹಾಗೂ ಹೃದಯಾಘಾತಕ್ಕೆ ಎಡೆಮಾಡಿಕೊಡುತ್ತದೆ. ಈ ಗಿಡಗಳ ಬೀಜಗಳು ನೆಲದ ಮೇಲೆ ಬಿದ್ದು ವೇಗವಾಗಿ ಬೆಳೆಯುತ್ತದೆ. ಗುಜರಾತ್ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈ ಗಿಡಗಳನ್ನು ನೆಡಲು ನಿಷೇಧಿಸಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಸರ್ಕಾರಿ ಕಚೇರಿ ಆವರಣಗಳಲ್ಲಿ ಈ ಗಿಡಗಳು ಯತೇಚ್ಛವಾಗಿ ಅರಣ್ಯ ಇಲಾಖೆಯಿಂದ ಬೆಳೆಸಲಾಗಿದೆ. ಕೊನೊಕಾರ್ಪಸ್ ತಳಿಯ ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಲಾಯಿತು.</p>.<p>ಜನಸೇವಾ ಫೌಂಡೇಶನ್ ಅಧ್ಯಕ್ಷ ಜಾವೀದ್ ಖಾನ್, ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>