ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಬಲ್ಲಟಗಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಮಕ್ಕಳಿಬ್ಬರು ಹೊಂಡವೊಂದರಲ್ಲಿ ಶವವಾಗಿ ಸೋಮವಾರಪತ್ತೆಯಾಗಿದ್ದಾರೆ.
ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಕಿರಿಯ ಪುತ್ರ ಶಿವಾನಂದರ ಮಕ್ಕಳಾದವರುಣ ನಾಯಕ (11), ತನಯ ನಾಯಕ (5) ಮೃತರಾಗಿದ್ದಾರೆ.
ಆಟವಾಡಲು ಮನೆಯಿಂದ ಹೊರಹೋಗಿದ್ದ ಇಬ್ಬರು ಬಾಲಕರು ಸಂಜೆಯಾದರೂ ಹಿಂತಿರುಗಿ ಬಂದಿರಲಿಲ್ಲ. ಭಾನುವಾರ ಸಂಜೆಯಿಂದ ಮನೆಯವರು ಗಾಬರಿಯಾಗಿ ಎಲ್ಲ ಕಡೆಗೂ ಹುಡುಕಾಟ ಆರಂಭಿಸಿದ್ದರು.
ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಬಲ್ಲಟಗಿ ಗ್ರಾಮದಲ್ಲಿ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ಆದರೆ, ಅವರು ಇಂದು ಹೊಂಡವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.#Children#DeathNews#HampayyaNayakpic.twitter.com/KMYJribOLx