<p><strong>ರಾಯಚೂರು</strong>: ಇಲ್ಲಿನ ಯರಮರಸ್ನಲ್ಲಿರುವ ತುಂಗಭದ್ರಾ ನೀರಾವರಿ ವಲಯ ಕಚೇರಿಯಲ್ಲಿ ಸೂಪರಿಡೆಂಟ್ ಎಂಜಿನಿಯರ್ ಸೇರಿ ನಾಲ್ವರು ಎಂಜಿನಿಯರುಗಳು ಗುರುವಾರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.</p>.<p>ಸೂಪರಿಡೆಂಟ್ ಎಂಜಿನಿಯರ್ ಸೂರ್ಯಕಾಂತ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನರಸಿಂಹರಾವ್ ದೇಶಪಾಂಡೆ, ಕಿರಿಯ ಎಂಜಿನಿಯರುಗಳಾದ ತುಕಾರಾಂ ಮತ್ತು ಭಾವನಾ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.</p>.<p>ಬಿಲ್ ಪಾಸ್ ಮಾಡಿಕೊಡಲು ಲಂಚ ನೀಡುವಂತೆ ಬಳ್ಳಾರಿಯ ಗುತ್ತಿಗೆದಾರರೊಬ್ಬರಿಗೆ ಎಂಜಿನಿಯರುಗಳು ಬೇಡಿಕೆ ಸಲ್ಲಿಸಿದ್ದರು. ಈ ಬಗ್ಗೆ ಲೋಕಾಯುಕ್ತರಿಗೆ ಮಾಹಿತಿ ನೀಡಿದ್ದ ಗುತ್ತಿಗೆದಾರ, ಎಂಜಿನಿಯರುಗಳಿಗೆ ಲಂಚ ನೀಡುವಾಗ ಯಶಸ್ವಿ ದಾಳಿ ನಡೆಸಲಾಗಿದೆ.<br />ಲೋಕಾಯುಕ್ತ ಎಸ್ಪಿ ಸಲೀಂ ಪಾಷಾ, ಡಿವೈಎಸ್ಪಿ ಕಲ್ಲೇಶಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಗುರು ಪಾಟೀಲ ಹಾಗೂ ಸಿಬ್ಬಂದಿ ಈ ದಾಳಿ ನಡೆಸಿದವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಇಲ್ಲಿನ ಯರಮರಸ್ನಲ್ಲಿರುವ ತುಂಗಭದ್ರಾ ನೀರಾವರಿ ವಲಯ ಕಚೇರಿಯಲ್ಲಿ ಸೂಪರಿಡೆಂಟ್ ಎಂಜಿನಿಯರ್ ಸೇರಿ ನಾಲ್ವರು ಎಂಜಿನಿಯರುಗಳು ಗುರುವಾರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.</p>.<p>ಸೂಪರಿಡೆಂಟ್ ಎಂಜಿನಿಯರ್ ಸೂರ್ಯಕಾಂತ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನರಸಿಂಹರಾವ್ ದೇಶಪಾಂಡೆ, ಕಿರಿಯ ಎಂಜಿನಿಯರುಗಳಾದ ತುಕಾರಾಂ ಮತ್ತು ಭಾವನಾ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.</p>.<p>ಬಿಲ್ ಪಾಸ್ ಮಾಡಿಕೊಡಲು ಲಂಚ ನೀಡುವಂತೆ ಬಳ್ಳಾರಿಯ ಗುತ್ತಿಗೆದಾರರೊಬ್ಬರಿಗೆ ಎಂಜಿನಿಯರುಗಳು ಬೇಡಿಕೆ ಸಲ್ಲಿಸಿದ್ದರು. ಈ ಬಗ್ಗೆ ಲೋಕಾಯುಕ್ತರಿಗೆ ಮಾಹಿತಿ ನೀಡಿದ್ದ ಗುತ್ತಿಗೆದಾರ, ಎಂಜಿನಿಯರುಗಳಿಗೆ ಲಂಚ ನೀಡುವಾಗ ಯಶಸ್ವಿ ದಾಳಿ ನಡೆಸಲಾಗಿದೆ.<br />ಲೋಕಾಯುಕ್ತ ಎಸ್ಪಿ ಸಲೀಂ ಪಾಷಾ, ಡಿವೈಎಸ್ಪಿ ಕಲ್ಲೇಶಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಗುರು ಪಾಟೀಲ ಹಾಗೂ ಸಿಬ್ಬಂದಿ ಈ ದಾಳಿ ನಡೆಸಿದವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>