<p><strong>ರಾಯಚೂರು: </strong>ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ಖರೀದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿ ಕಲಬುರ್ಗಿ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಆದೇಶ ಹೊರಡಿಸಿದ್ದಾರೆ.</p>.<p>ದೇವದುರ್ಗದ ಅಲ್ಕೋಡ ಶಾಲೆಯ ಬಸವರಾಜ, ಆಕಳಕುಂಪಿ ಶಾಲೆಯ ಕೊಟ್ರೇಶ್, ಮಾನ್ವಿ ತಾಲ್ಲೂಕಿನ ರಾಜಲಬಂಡಾ ಶಾಲೆಯ ಗೀತಾ ಹಾಗೂ ರಾಯಚೂರು ತಾಲ್ಲೂಕಿನ ಮಲಿಯಾಬಾದ್ ಶಾಲೆಯ ಅಲಿಸಾ ಅವರನ್ನು ಅಮಾನತು ಮಾಡಲಾಗಿದೆ.</p>.<p>ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ಬೂಟುಗಳನ್ನು ವಿತರಿಸಲಾಗಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಜಿಲ್ಲಾಡಳಿತದ ಮೂಲಕ ಶಿಕ್ಷಣ ಸಚಿವರಿಗೆ ದೂರು ಸಲ್ಲಿಸಿದ್ದರು. ಈ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಶಿಕ್ಷಣ ಸಚಿವರು ಆದೇಶಿಸಿದ್ದರು. ಅದರಂತೆ ಸಮಿತಿ ರಚಿಸಿ ತನಿಖೆ ನಡೆಸಲಾಗಿತ್ತು. ನಾಲ್ಕು ಪ್ರಾಥಮಿಕ ಶಾಲೆ ಹಾಗೂ ಮೂರು ಪ್ರೌಢ ಶಾಲೆಗಳಲ್ಲಿ ಅಕ್ರಮ ನಡೆದಿರುವುದು ಸಮಿತಿ ಉಲ್ಲೇಖಿಸಿದೆ.</p>.<p>‘ಇನ್ನುಳಿದ ರಾಯಚೂರು ತಾಲ್ಲೂಕಿನ ಬಿಜನಗೇರ ಶಾಲೆಯ ಅರುಣಕುಮಾರ ದೇಸಾಯಿ, ಚಿಂಚೋಡಿ ಶಾಲೆಯ ಮಹಾಂತೇಶ, ರಾಯಚೂರ ನಗರದ ಎಲ್ಬಿಎಸ್ ಕಾಲೋನಿ ಶಾಲೆಯ ಶಿಕ್ಷಕ ಎಂ.ಎಚ್. ನಾಯಕ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು’ ಎಂದು ಡಿಡಿಪಿಐ ಎಚ್.ಬಿ.ಗೋನಾಳ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ಖರೀದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿ ಕಲಬುರ್ಗಿ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಆದೇಶ ಹೊರಡಿಸಿದ್ದಾರೆ.</p>.<p>ದೇವದುರ್ಗದ ಅಲ್ಕೋಡ ಶಾಲೆಯ ಬಸವರಾಜ, ಆಕಳಕುಂಪಿ ಶಾಲೆಯ ಕೊಟ್ರೇಶ್, ಮಾನ್ವಿ ತಾಲ್ಲೂಕಿನ ರಾಜಲಬಂಡಾ ಶಾಲೆಯ ಗೀತಾ ಹಾಗೂ ರಾಯಚೂರು ತಾಲ್ಲೂಕಿನ ಮಲಿಯಾಬಾದ್ ಶಾಲೆಯ ಅಲಿಸಾ ಅವರನ್ನು ಅಮಾನತು ಮಾಡಲಾಗಿದೆ.</p>.<p>ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ಬೂಟುಗಳನ್ನು ವಿತರಿಸಲಾಗಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಜಿಲ್ಲಾಡಳಿತದ ಮೂಲಕ ಶಿಕ್ಷಣ ಸಚಿವರಿಗೆ ದೂರು ಸಲ್ಲಿಸಿದ್ದರು. ಈ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಶಿಕ್ಷಣ ಸಚಿವರು ಆದೇಶಿಸಿದ್ದರು. ಅದರಂತೆ ಸಮಿತಿ ರಚಿಸಿ ತನಿಖೆ ನಡೆಸಲಾಗಿತ್ತು. ನಾಲ್ಕು ಪ್ರಾಥಮಿಕ ಶಾಲೆ ಹಾಗೂ ಮೂರು ಪ್ರೌಢ ಶಾಲೆಗಳಲ್ಲಿ ಅಕ್ರಮ ನಡೆದಿರುವುದು ಸಮಿತಿ ಉಲ್ಲೇಖಿಸಿದೆ.</p>.<p>‘ಇನ್ನುಳಿದ ರಾಯಚೂರು ತಾಲ್ಲೂಕಿನ ಬಿಜನಗೇರ ಶಾಲೆಯ ಅರುಣಕುಮಾರ ದೇಸಾಯಿ, ಚಿಂಚೋಡಿ ಶಾಲೆಯ ಮಹಾಂತೇಶ, ರಾಯಚೂರ ನಗರದ ಎಲ್ಬಿಎಸ್ ಕಾಲೋನಿ ಶಾಲೆಯ ಶಿಕ್ಷಕ ಎಂ.ಎಚ್. ನಾಯಕ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು’ ಎಂದು ಡಿಡಿಪಿಐ ಎಚ್.ಬಿ.ಗೋನಾಳ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>