ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಕ್ತಿನಗರ: ಪತ್ತೆಯಾಗದ ನಾಲ್ಕು ಮಂದಿ, ಮುಂದುವರಿದ ಶೋಧ

Last Updated 18 ಆಗಸ್ಟ್ 2020, 4:24 IST
ಅಕ್ಷರ ಗಾತ್ರ
ADVERTISEMENT
""

ಶಕ್ತಿನಗರ: ಪೆದ್ದಕುರಂ ಸಮೀಪದ ಕೃಷ್ಣಾ ನದಿಯಲ್ಲಿ ಸೋಮವಾರ ಸಂಜೆ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮಂಗಳವಾರ ಬೆಳಿಗ್ಗೆಯೂ ಮುಂದುವರೆದಿದೆ.

ಎನ್‌ಡಿಆರ್‌ಫ್ ತಂಡ ಮತ್ತು ಪೊಲೀಸ್ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಕೃಷ್ಣಾ ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದು, ನಾಲ್ವರು ತೆಲಂಗಾಣ ಗಡಿ ಪ್ರದೇಶದಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆಯಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದ ಮುಖ್ತಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಪಾಡುವಿನಲ್ಲಿ ಸಂತೆ ಮುಗಿಸಿಕೊಂಡು 13 ಮಂದಿ ತೆಪ್ಪದಲ್ಲಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ.

'ತೆಪ್ಪದಲ್ಲಿದ್ದ 9 ಜನರನ್ನು ರಕ್ಷಿಸಲಾಗಿದೆ. ಕಾಣೆಯಾಗಿರುವ ಬಾಲಕಿ ಮತ್ತು ಮೂವರು ಮಹಿಳೆಯರಿಗಾಗಿ ಶೋಧ ತೀವ್ರಗೊಳಿಸಲಾಗಿದೆ' ಎಂದು ತಹಶಿಲ್ದಾರ್ ಹಂಪಣ್ಣ ಸಜ್ಜನ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT