<figcaption>""</figcaption>.<p><strong>ಶಕ್ತಿನಗರ:</strong> ಪೆದ್ದಕುರಂ ಸಮೀಪದ ಕೃಷ್ಣಾ ನದಿಯಲ್ಲಿ ಸೋಮವಾರ ಸಂಜೆ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮಂಗಳವಾರ ಬೆಳಿಗ್ಗೆಯೂ ಮುಂದುವರೆದಿದೆ.</p>.<p>ಎನ್ಡಿಆರ್ಫ್ ತಂಡ ಮತ್ತು ಪೊಲೀಸ್ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಕೃಷ್ಣಾ ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದು, ನಾಲ್ವರು ತೆಲಂಗಾಣ ಗಡಿ ಪ್ರದೇಶದಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆಯಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ತೆಲಂಗಾಣದ ಮುಖ್ತಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಪಾಡುವಿನಲ್ಲಿ ಸಂತೆ ಮುಗಿಸಿಕೊಂಡು 13 ಮಂದಿ ತೆಪ್ಪದಲ್ಲಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ.</p>.<p>'ತೆಪ್ಪದಲ್ಲಿದ್ದ 9 ಜನರನ್ನು ರಕ್ಷಿಸಲಾಗಿದೆ. ಕಾಣೆಯಾಗಿರುವ ಬಾಲಕಿ ಮತ್ತು ಮೂವರು ಮಹಿಳೆಯರಿಗಾಗಿ ಶೋಧ ತೀವ್ರಗೊಳಿಸಲಾಗಿದೆ' ಎಂದು ತಹಶಿಲ್ದಾರ್ ಹಂಪಣ್ಣ ಸಜ್ಜನ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಶಕ್ತಿನಗರ:</strong> ಪೆದ್ದಕುರಂ ಸಮೀಪದ ಕೃಷ್ಣಾ ನದಿಯಲ್ಲಿ ಸೋಮವಾರ ಸಂಜೆ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮಂಗಳವಾರ ಬೆಳಿಗ್ಗೆಯೂ ಮುಂದುವರೆದಿದೆ.</p>.<p>ಎನ್ಡಿಆರ್ಫ್ ತಂಡ ಮತ್ತು ಪೊಲೀಸ್ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಕೃಷ್ಣಾ ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದು, ನಾಲ್ವರು ತೆಲಂಗಾಣ ಗಡಿ ಪ್ರದೇಶದಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆಯಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ತೆಲಂಗಾಣದ ಮುಖ್ತಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಪಾಡುವಿನಲ್ಲಿ ಸಂತೆ ಮುಗಿಸಿಕೊಂಡು 13 ಮಂದಿ ತೆಪ್ಪದಲ್ಲಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ.</p>.<p>'ತೆಪ್ಪದಲ್ಲಿದ್ದ 9 ಜನರನ್ನು ರಕ್ಷಿಸಲಾಗಿದೆ. ಕಾಣೆಯಾಗಿರುವ ಬಾಲಕಿ ಮತ್ತು ಮೂವರು ಮಹಿಳೆಯರಿಗಾಗಿ ಶೋಧ ತೀವ್ರಗೊಳಿಸಲಾಗಿದೆ' ಎಂದು ತಹಶಿಲ್ದಾರ್ ಹಂಪಣ್ಣ ಸಜ್ಜನ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>