ಸಿಂಧನೂರು (ರಾಯಚೂರು ಜಿಲ್ಲೆ): ಮೌನೇಶ ಮತ್ತು ಮಂಜುಳಾ ಎಂಬುವರ ಪ್ರೇಮ ವಿವಾಹಕ್ಕೆ ಸಂಬಂಧಿಸಿದಂತೆ ಶನಿವಾರ ನಡೆದ ನಾಲ್ವರ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಕುಟುಂಬದ ಮುಖ್ಯಸ್ಥ, ಮೌನೇಶನ ತಂದೆ ಈರಪ್ಪ (58) ಅವರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ರಾತ್ರಿ ಸಾವನ್ನಪ್ಪಿದ್ದಾರೆ.
ಪ್ರಕರಣದ ಆರೋಪಿಗಳಾದ ಫಕೀರಪ್ಪ, ರೇಣುಕಾ, ಸೋಮಶೇಖರ, ಗಂಗಮ್ಮ ಮತ್ತು ಅಂಬಣ್ಣ ಎಂಬುವರು ತಲೆಮರೆಸಿಕೊಂಡಿದ್ದರು. ಕಾರ್ಯಾಚರಣೆ ನಡೆಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಐಜಿಪಿ ಎಂ.ನಂಜುಂಡಸ್ವಾಮಿ, ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.