<p><strong>ರಾಯಚೂರು</strong>: ಅರುಜೀವಾ ಆಯುರ್ವೇದ ಆಸ್ಪತ್ರೆ, ರೋಟರಿ ಕ್ಲಬ್ ಹಾಗೂ ರಾಯಚೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಮಂಗಳವಾರ ಉಚಿತ ಆಯುರ್ವೇದ ಆರೋಗ್ಯ ಶಿಬಿರ ನಡೆಯಿತು.</p>.<p>ಮಹಾನಗರ ಪಾಲಿಕೆ ಉಪ ಆಯುಕ್ತೆ ಸಂತೋಷರಾಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಆಯುರ್ವೇದ ಸನಾತನ ಚಿಕಿತ್ಸಾ ಪದ್ಧತಿಯಾಗಿದೆ. ಅದರನ್ನು ಸಮರ್ಥವಾಗಿ ಬಳಸಿಕೊಳ್ಳಬೇಕಾಗಿದೆ’ ಎಂದು ಹೇಳಿದರು.</p>.<p>ಅರುಜೀವಾ ಆಯುರ್ವೇದ ಆಸ್ಪತ್ರೆಯ ಮಲ್ಲಿಕಾರ್ಜುನ ಮಾತನಾಡಿ, ‘ಪೌರ ಕಾರ್ಮಿಕ ದಿನ ಹಾಗೂ ರಾಷ್ಟ್ರೀಯ ಆಯುರ್ವೇದ ದಿನವನ್ನು ಒಟ್ಟಿಗೆ ಆಚರಿಸಲಾಗುತ್ತಿದೆ. ಪೌರ ಕಾರ್ಮಿಕರಿಗಾಗಿ ₹ 5 ಸಾವಿರ ವಿಶೇಷ ಪ್ಯಾಕೇಜ್ ನೀಡಲಾಗಿದೆ. ಪೌರ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಬೇಕು’ ಎಂದರು.</p>.<p>‘ಹಿಂದಿನ ಕಾಲದಲ್ಲಿ ಮನೆಯಲ್ಲಿನ ಹಿರಿಯರು ಸಣ್ಣಪುಟ್ಟ ಕಾಯಿಲೆಗಳಿಗೆ ಮನೆಯಲ್ಲೇ ದೊರೆಯುವ ಸಾಮಗ್ರಿಗಳನ್ನು ಬಳಸಿ ಔಷಧ ಸಿದ್ಧಪಡಿಸಿ ಸೇವಿಸುತ್ತಿದ್ದರು. ಕಾಯಿಲೆಯಿಂದ ಗುಣಮುಖರಾಗುತ್ತಿದ್ದರು. ಜೀವನ ಶೈಲಿ ಬದಲಾದ ಕಾರಣ ಆರೋಗ್ಯದಲ್ಲೂ ಏರುಪೇರು ಆಗುತ್ತಿದೆ’ ಎಂದು ತಿಳಿಸಿದರು.</p>.<p>ಅರುಜೀವಾ ಆಯುರ್ವೇದ ಆಸ್ಪತ್ರೆ ಸಿಇಒ ಗೌಸ್ಕುಮಾರ, ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಕಮಲಕುಮಾರ ಜೈನ್, ಕಾರ್ಯದರ್ಶಿ ಜಂಬಣ್ಣ ಯಕ್ಲಾಸಪುರ, ತ್ರಿವಿಕ್ರಮ ಜೋಶಿ, ಮಹಾನಗರ ಪಾಲಿಕೆ ಅಧಿಕಾರಿ ಜೈಪಾಲರಡ್ಡಿ ಉಪಸ್ಥಿತರಿದ್ದರು.</p>.<p>ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು ಹಾಗೂ ಉಚಿತವಾಗಿ ಔಷಧ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಅರುಜೀವಾ ಆಯುರ್ವೇದ ಆಸ್ಪತ್ರೆ, ರೋಟರಿ ಕ್ಲಬ್ ಹಾಗೂ ರಾಯಚೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಮಂಗಳವಾರ ಉಚಿತ ಆಯುರ್ವೇದ ಆರೋಗ್ಯ ಶಿಬಿರ ನಡೆಯಿತು.</p>.<p>ಮಹಾನಗರ ಪಾಲಿಕೆ ಉಪ ಆಯುಕ್ತೆ ಸಂತೋಷರಾಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಆಯುರ್ವೇದ ಸನಾತನ ಚಿಕಿತ್ಸಾ ಪದ್ಧತಿಯಾಗಿದೆ. ಅದರನ್ನು ಸಮರ್ಥವಾಗಿ ಬಳಸಿಕೊಳ್ಳಬೇಕಾಗಿದೆ’ ಎಂದು ಹೇಳಿದರು.</p>.<p>ಅರುಜೀವಾ ಆಯುರ್ವೇದ ಆಸ್ಪತ್ರೆಯ ಮಲ್ಲಿಕಾರ್ಜುನ ಮಾತನಾಡಿ, ‘ಪೌರ ಕಾರ್ಮಿಕ ದಿನ ಹಾಗೂ ರಾಷ್ಟ್ರೀಯ ಆಯುರ್ವೇದ ದಿನವನ್ನು ಒಟ್ಟಿಗೆ ಆಚರಿಸಲಾಗುತ್ತಿದೆ. ಪೌರ ಕಾರ್ಮಿಕರಿಗಾಗಿ ₹ 5 ಸಾವಿರ ವಿಶೇಷ ಪ್ಯಾಕೇಜ್ ನೀಡಲಾಗಿದೆ. ಪೌರ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಬೇಕು’ ಎಂದರು.</p>.<p>‘ಹಿಂದಿನ ಕಾಲದಲ್ಲಿ ಮನೆಯಲ್ಲಿನ ಹಿರಿಯರು ಸಣ್ಣಪುಟ್ಟ ಕಾಯಿಲೆಗಳಿಗೆ ಮನೆಯಲ್ಲೇ ದೊರೆಯುವ ಸಾಮಗ್ರಿಗಳನ್ನು ಬಳಸಿ ಔಷಧ ಸಿದ್ಧಪಡಿಸಿ ಸೇವಿಸುತ್ತಿದ್ದರು. ಕಾಯಿಲೆಯಿಂದ ಗುಣಮುಖರಾಗುತ್ತಿದ್ದರು. ಜೀವನ ಶೈಲಿ ಬದಲಾದ ಕಾರಣ ಆರೋಗ್ಯದಲ್ಲೂ ಏರುಪೇರು ಆಗುತ್ತಿದೆ’ ಎಂದು ತಿಳಿಸಿದರು.</p>.<p>ಅರುಜೀವಾ ಆಯುರ್ವೇದ ಆಸ್ಪತ್ರೆ ಸಿಇಒ ಗೌಸ್ಕುಮಾರ, ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಕಮಲಕುಮಾರ ಜೈನ್, ಕಾರ್ಯದರ್ಶಿ ಜಂಬಣ್ಣ ಯಕ್ಲಾಸಪುರ, ತ್ರಿವಿಕ್ರಮ ಜೋಶಿ, ಮಹಾನಗರ ಪಾಲಿಕೆ ಅಧಿಕಾರಿ ಜೈಪಾಲರಡ್ಡಿ ಉಪಸ್ಥಿತರಿದ್ದರು.</p>.<p>ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು ಹಾಗೂ ಉಚಿತವಾಗಿ ಔಷಧ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>