ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಲ್ವಿಡಿ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 5.30 ರಿಂದ 7 ರವರೆಗೂ ಶಿಬಿರ ನಡೆಯುವುದು. ನ್ಯಾಯಾಧೀಶ ಬೈಲೂರು ಶಂಕರರಾಮ ಅವರು ಶಿಬಿರ ಉದ್ಘಾಟನೆ ಮಾಡುವರು. ಯೋಗದಿಂದ ಆರೋಗ್ಯ ಸುಧಾರಣೆಗೆ ಆಗುವ ಅನುಕೂಲಗಳ ಬಗ್ಗೆ ಜನರಿಗೆ ಅರಿವಿದೆ. ಮನಸ್ಸಿನ ಶುದ್ಧಿ, ಧನಾತ್ಮಕ ವಿಚಾರಗಳನ್ನು ಬೆಳೆಸಿಕೊಳ್ಳಲು ಯೋಗವು ಸಹಕಾರಿಯಾಗಿದೆ ಎಂದು ತಿಳಿಸಿದರು.