ಆಸಕ್ತರು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಸೂಕ್ತ ಬೆಲೆಗೆ ಮಾರಾಟ ಮಾಡುವ ಅವಕಾಶದ ಸದ್ಭಳಕೆಯನ್ನು ಮಾಡಿಕೊಳ್ಳಬಹುದಾಗಿದೆ.
‘ಮುಂದಿನ ದಿನಗಳಲ್ಲಿ ಮಾವು ಕೂಡ ಕಟಾವಿಗೆ ಬರಲಿದ್ದು , ಮಾವು ಬೆಳೆಗಾರರು ಆತಂಕ ಪಡದೇ ತಮ್ಮ ಹಣ್ಣನ್ನು ಕಟಾವು ಮಾಡಿ, ರಾಸಾಯನಿಕ ಬಳಸದೆ ನೈಸರ್ಗಿಕ ರೀತಿಯಲ್ಲಿ ಮಾಗಿಸಿ ತಮ್ಮ ಹಣ್ಣುಗಳನ್ನು ಇಲಾಖೆಗೆ ತಂದು ಮಾರಾಟ ಮಾಡುವ ಅವಕಾಶವಿರುತ್ತದೆ. ಆದ್ದರಿಂದ ರೈತರು ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಮಾವಿನ ಹಣ್ಣನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬಹುದಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.
ರೈತರು ತಮ್ಮ ಉತ್ಪನ್ನವನ್ನು ಸರಿಯಾದ ಸಮಯದಲ್ಲಿ ಕಟಾವು ಮಾಡಿ ಪ್ಲಾಸ್ಟಿಕ್ ಕ್ರೇಟ್ಗಳಲ್ಲಿ ಸಂಗ್ರಹಿಸಿ ಇಲಾಖೆಗೆ ತಂದು ಮಾರಾಟ ಮಾಡುವುದಕ್ಕೆ ಅವಕಾಶ ಇರುತ್ತದೆ. ಮಧ್ಯವರ್ತಿಗಳ ಪಾಲಾಗುವ ಲಾಭವನ್ನು ರೈತರು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ತಾಜಾ ತರಕಾರಿಗಳನ್ನು ಖರೀದಿಸಲು ಜನರು ಆಸಕ್ತಿಯಿಂದ ಮುಂದೆ ಬರುತ್ತಾರೆ.