<p><strong>ರಾಯಚೂರು:</strong> ರಾಜ್ಯಮಟ್ಟದ ಅತ್ಯಾಧುನಿಕ ಪ್ರಯೋಗಾಲಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿದ್ದಾರೆ. ಗುಜರಾತ್ ನಂತರ ಅತ್ಯಾಧುನಿಕ ಸೌಲಭ್ಯಗಳಿರುವ ಪ್ರಯೋಗಾಲಯ ಇದಾಗಿದೆ. ಮುಂಬರುವ ದಿನದಲ್ಲಿ ರಾಯಚೂರಿನಲ್ಲೂ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶನಿವಾರ, ಪೊಲೀಸ್ ಕಾರ್ಯಚಟುವಟಿಕೆಗಳ ಅವಲೋಕನ ಸಭೆ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ವಿಭಾಗೀಯ ಮಟ್ಟದಲ್ಲಿ ಮೊದಲ ಹಂತದಲ್ಲಿ ಪ್ರಯೋಗಾಲಯ ಮಾಡಲಾಗುವುದು. ಎರಡನೇ ಹಂತದಲ್ಲಿ ಪ್ರತಿ ಜಿಲ್ಲೆಯಲ್ಲೂ ಮಾಡಲಾಗುವುದು. ಪೊಲೀಸ್ ವ್ಯವಸ್ಥೆಯ ಆಧುನೀಕರಣದ ಅಗತ್ಯವಿದ್ದು, ಮೊದಲ ಚರಣ ಈಗಾಗಲೇ ₹100 ಕೋಟಿ ಅನುದಾನದಲ್ಲಿ ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ಅನುದಾನದಲ್ಲೂ ಈ ಯೋಜನೆ ಕಾರ್ಯಗತ ಮಾಡಲಾಗುವುದು ಎಂದು ತಿಳಿಸಿದರು.</p>.<p>ಪೊಲೀಸ್ ಠಾಣೆಗಳ ಅಭಿವೃದ್ಧಿ, ವಾಹನಗಳ ಖರೀದಿ, ಶಸ್ತ್ರಾಸ್ತ್ರಗಳ ಕರೀದಿ, ಕ್ಯಾಮರಾ ಸೇರಿದಂತೆ ಹಲವು ಸೌಲಭ್ಯಗಳನ್ನು ಹೆಚ್ಚಿಸಲಾಗುವುದು. ಎಲ್ಲ ಹಂತದಲ್ಲೂ ಪ್ರಯೋಗಾಲಯ ಕಾರ್ಯಕ್ಷಮತೆ ಹೆಚ್ಚಿಸಲಾಗಿದೆ. ಬೆರಳಚ್ಚು, ವಿಷ ಪದಾರ್ಥ, ಮಾದಕದ್ರವ್ಯ ಹಾಗೂ ಸೈಬರ್ಗೆ ಸಂಬಂಧಿಸಿದ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.</p>.<p>ಮಾನವ ಕಳ್ಳಸಾಗಣೆ ಅಂತರರಾಷ್ಟ್ರೀಯ ಮಟ್ಟದ ಅಪರಾಧವಾಗಿದೆ. ಶಶ್ತ್ರಾಸ್ತ್ರ ಸಾಗಣೆ, ಮಾದಕದ್ರವ್ಯ ಹಾಗೂ ಮಾನವ ಸಾಗಣೆ ಅಪರಾಧಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಈ ಮೂರು ಪ್ರಕರಣಗಳ ಅಪರಾಧವನ್ನು ಬೇಧಿಸಲು ಅಗತ್ಯ ಕಾರ್ಯಪಡೆ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.</p>.<p>ಪೊಲೀಸ್ ಠಾಣೆಗಳ ಆಧುನೀಕರಣ ಮಾಡುವುದಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ)ಯಿಂದ ಪಡೆದುಕೊಳ್ಳಬೇಕಿದ್ದ ಅನುದಾನದ ನೆರವು ಪಡೆದಿಲ್ಲ. ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿದೆ. ಈ ಭಾಗದಲ್ಲಿ ಇದುವರೆಗೂ ಆಗದಿರುವ ಕೆಲಸಗಳನ್ನು ಮಾಡಿಕೊಡಲಾಗುವುದು. 371 (ಜೆ) ಪ್ರಮಾಣಪತ್ರ ಆಧರಿಸಿ ಬಡ್ತಿ ನೀಡುವ ಹಂತದಲ್ಲಿ ಸಮಗ್ರ ಪರಿಶೀಲನೆ ಮಾಡುವುದಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.</p>.<p>ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಿವನಗೌಡ ನಾಯಕ, ಕರ್ನಾಟಕ ರಾಜ್ಯ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶಿವರಾಜ ಪಾಟೀಲ, ಶಾಸಕ ವೆಂಕಟರಾವ್ ನಾಡಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ರಾಜ್ಯಮಟ್ಟದ ಅತ್ಯಾಧುನಿಕ ಪ್ರಯೋಗಾಲಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿದ್ದಾರೆ. ಗುಜರಾತ್ ನಂತರ ಅತ್ಯಾಧುನಿಕ ಸೌಲಭ್ಯಗಳಿರುವ ಪ್ರಯೋಗಾಲಯ ಇದಾಗಿದೆ. ಮುಂಬರುವ ದಿನದಲ್ಲಿ ರಾಯಚೂರಿನಲ್ಲೂ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶನಿವಾರ, ಪೊಲೀಸ್ ಕಾರ್ಯಚಟುವಟಿಕೆಗಳ ಅವಲೋಕನ ಸಭೆ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ವಿಭಾಗೀಯ ಮಟ್ಟದಲ್ಲಿ ಮೊದಲ ಹಂತದಲ್ಲಿ ಪ್ರಯೋಗಾಲಯ ಮಾಡಲಾಗುವುದು. ಎರಡನೇ ಹಂತದಲ್ಲಿ ಪ್ರತಿ ಜಿಲ್ಲೆಯಲ್ಲೂ ಮಾಡಲಾಗುವುದು. ಪೊಲೀಸ್ ವ್ಯವಸ್ಥೆಯ ಆಧುನೀಕರಣದ ಅಗತ್ಯವಿದ್ದು, ಮೊದಲ ಚರಣ ಈಗಾಗಲೇ ₹100 ಕೋಟಿ ಅನುದಾನದಲ್ಲಿ ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ಅನುದಾನದಲ್ಲೂ ಈ ಯೋಜನೆ ಕಾರ್ಯಗತ ಮಾಡಲಾಗುವುದು ಎಂದು ತಿಳಿಸಿದರು.</p>.<p>ಪೊಲೀಸ್ ಠಾಣೆಗಳ ಅಭಿವೃದ್ಧಿ, ವಾಹನಗಳ ಖರೀದಿ, ಶಸ್ತ್ರಾಸ್ತ್ರಗಳ ಕರೀದಿ, ಕ್ಯಾಮರಾ ಸೇರಿದಂತೆ ಹಲವು ಸೌಲಭ್ಯಗಳನ್ನು ಹೆಚ್ಚಿಸಲಾಗುವುದು. ಎಲ್ಲ ಹಂತದಲ್ಲೂ ಪ್ರಯೋಗಾಲಯ ಕಾರ್ಯಕ್ಷಮತೆ ಹೆಚ್ಚಿಸಲಾಗಿದೆ. ಬೆರಳಚ್ಚು, ವಿಷ ಪದಾರ್ಥ, ಮಾದಕದ್ರವ್ಯ ಹಾಗೂ ಸೈಬರ್ಗೆ ಸಂಬಂಧಿಸಿದ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.</p>.<p>ಮಾನವ ಕಳ್ಳಸಾಗಣೆ ಅಂತರರಾಷ್ಟ್ರೀಯ ಮಟ್ಟದ ಅಪರಾಧವಾಗಿದೆ. ಶಶ್ತ್ರಾಸ್ತ್ರ ಸಾಗಣೆ, ಮಾದಕದ್ರವ್ಯ ಹಾಗೂ ಮಾನವ ಸಾಗಣೆ ಅಪರಾಧಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಈ ಮೂರು ಪ್ರಕರಣಗಳ ಅಪರಾಧವನ್ನು ಬೇಧಿಸಲು ಅಗತ್ಯ ಕಾರ್ಯಪಡೆ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.</p>.<p>ಪೊಲೀಸ್ ಠಾಣೆಗಳ ಆಧುನೀಕರಣ ಮಾಡುವುದಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ)ಯಿಂದ ಪಡೆದುಕೊಳ್ಳಬೇಕಿದ್ದ ಅನುದಾನದ ನೆರವು ಪಡೆದಿಲ್ಲ. ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿದೆ. ಈ ಭಾಗದಲ್ಲಿ ಇದುವರೆಗೂ ಆಗದಿರುವ ಕೆಲಸಗಳನ್ನು ಮಾಡಿಕೊಡಲಾಗುವುದು. 371 (ಜೆ) ಪ್ರಮಾಣಪತ್ರ ಆಧರಿಸಿ ಬಡ್ತಿ ನೀಡುವ ಹಂತದಲ್ಲಿ ಸಮಗ್ರ ಪರಿಶೀಲನೆ ಮಾಡುವುದಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.</p>.<p>ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಿವನಗೌಡ ನಾಯಕ, ಕರ್ನಾಟಕ ರಾಜ್ಯ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶಿವರಾಜ ಪಾಟೀಲ, ಶಾಸಕ ವೆಂಕಟರಾವ್ ನಾಡಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>