<p>ಜಾಲಹಳ್ಳಿ:ಸಮೀಪದ ಗಲಗ ಗ್ರಾಮದಲ್ಲಿ ಸುಟ್ಟು ಹೋಗಿದ್ದ ವಿದ್ಯುತ್ ಪರಿವರ್ತಕ ವನ್ನು ಜೆಸ್ಕಾಂ ಅಧಿಕಾರಿಗಳು ಮಂಗಳವಾರ ದುರಸ್ತಿಗೊಳಿಸಿ ಪುನಃ ಅದೇ ಸ್ಥಳದಲ್ಲಿ ಅಳವಡಿಸಿದ್ದಾರೆ.</p>.<p>ಕಳೆದ 15 ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ರಾತ್ರಿ ಬೆಳಕಿನ ವ್ಯವಸ್ಥೆ ಇಲ್ಲದೇ ಜನತೆ ತುಂಬಾ ತೊಂದರೆ ಅನುಭವಿಸಿದ್ದರು. ಈ ಕುರಿತು ‘ಗಲಗ:ನೀರಿನ ಸಮಸ್ಯೆ ಉಲ್ಬಣ’ ಶೀರ್ಷಿಕೆಯಡಿ ಮೇ 31ರಂದು ‘ಪ್ರಜಾವಾಣಿ’ಯಲ್ಲಿ ಸುದ್ದಿ ಪ್ರಕಟವಾಗಿತ್ತು.</p>.<p>ಸಮಸ್ಯೆ ಅರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಿದ್ದರು. ಅಲ್ಲದೆ ಜೆಸ್ಕಾಂ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ದುರಸ್ತಿಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿತ್ತು ಎಂದು ಪಿಡಿಒ ಚನ್ನಬಸವ. ಬಿ. ಗಣೇಕಲ್ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-32-2064207269</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾಲಹಳ್ಳಿ:ಸಮೀಪದ ಗಲಗ ಗ್ರಾಮದಲ್ಲಿ ಸುಟ್ಟು ಹೋಗಿದ್ದ ವಿದ್ಯುತ್ ಪರಿವರ್ತಕ ವನ್ನು ಜೆಸ್ಕಾಂ ಅಧಿಕಾರಿಗಳು ಮಂಗಳವಾರ ದುರಸ್ತಿಗೊಳಿಸಿ ಪುನಃ ಅದೇ ಸ್ಥಳದಲ್ಲಿ ಅಳವಡಿಸಿದ್ದಾರೆ.</p>.<p>ಕಳೆದ 15 ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ರಾತ್ರಿ ಬೆಳಕಿನ ವ್ಯವಸ್ಥೆ ಇಲ್ಲದೇ ಜನತೆ ತುಂಬಾ ತೊಂದರೆ ಅನುಭವಿಸಿದ್ದರು. ಈ ಕುರಿತು ‘ಗಲಗ:ನೀರಿನ ಸಮಸ್ಯೆ ಉಲ್ಬಣ’ ಶೀರ್ಷಿಕೆಯಡಿ ಮೇ 31ರಂದು ‘ಪ್ರಜಾವಾಣಿ’ಯಲ್ಲಿ ಸುದ್ದಿ ಪ್ರಕಟವಾಗಿತ್ತು.</p>.<p>ಸಮಸ್ಯೆ ಅರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಿದ್ದರು. ಅಲ್ಲದೆ ಜೆಸ್ಕಾಂ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ದುರಸ್ತಿಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿತ್ತು ಎಂದು ಪಿಡಿಒ ಚನ್ನಬಸವ. ಬಿ. ಗಣೇಕಲ್ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-32-2064207269</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>