<p>ಗಂಗಾವತಿ: ‘ಈಡಿಗ ಸಮಾಜದ ಬೇಡಿಕೆಗಳ ಈಡೇರಿಕೆ ವಿಚಾರವಾಗಿ ಏ.4ರಂದು ಹಮ್ಮಿಕೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ನಿವಾಸದ ಮೇಲೆ ಮುತ್ತಿಗೆಯನ್ನು ಸದ್ಯ ಕೈ ಬಿಡಲಾಗಿದೆ’ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಡಿಗ ಸಮುದಾಯದ 18 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಲ ತಿಂಗಳ ಹಿಂದೆ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಆ ಸ್ಥಳಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಶಿವರಾಜ ತಂಗಡಗಿ ಮನವಿ ಸ್ವೀಕರಿಸಿ, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಸಚಿವರು ಭರವಸೆ ಈಡೇರಿಸದ ಕಾರಣ ಮನೆ ಮುತ್ತಿಗೆಗೆ ನಿರ್ಧಾರ ಕೈಗೊಳ್ಳಲಾಗಿತ್ತು’ ಎಂದರು.</p>.<p>‘ಇನ್ನೂ ನಮ್ಮದೇ ಸಮುದಾಯದ ಸಚಿವ ಮಧು ಬಂಗಾರಪ್ಪ ಸಮುದಾಯ ದ್ರೋಹಿ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಈಡಿಗ ಸಮಾಜಕ್ಕೆ ನಯಾಪೈಸೆ ಬಿಡುಗಡೆ ಆಗಿಲ್ಲ. ಈ ಬಗ್ಗೆ ಮಧು ಬಂಗಾರಪ್ಪನವರು ಪ್ರಶ್ನೆ ಮಾಡಲ್ಲ. ಸಿಎಂಗೆ ಭೇಟಿ ಮಾಡಿಸದಂತೆ ತಂಗಡಗಿ ಮೇಲೆ ಒತ್ತಡ ಹೇರಿ, ತಡೆಯುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ರಾಜ್ಯದಲ್ಲಿ ಮುಖ್ಯಮಂತ್ರಿ ಮಾಡುವ ಶಕ್ತಿ ಇದ್ದ ಈಡಿಗ ಸಮಾಜಕ್ಕೆ ಒಂದು ಮುಖ್ಯಮಂತ್ರಿ ಭೇಟಿ ಮಾಡುವ ಅವಕಾಶ ಸಿಗದಿರುವುದು ದುರಂತ. ಅಲ್ಲದೇ ನಾವು ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಕೆಲವರು ಬಿಜೆಪಿ ಘೋಷಿತ ಎನ್ನುತ್ತಿದ್ದಾರೆ. ಕಾಲವೇ ಮುಂದೆ ಉತ್ತರ ನೀಡಲಿದೆ’ ಎಂದರು.</p>.<p>ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷ ಕಾಶಿ ವಿಶ್ವನಾಥ, ಪರಮೇಶ, ಯರಡೋಣ ನಾಗಪ್ಪ, ವಿರೇಶ, ಹನುಮಂತರಾಯ, ಶಾಂತಪ್ಪ, ಅಂಬುಜಮ್ಮ, ಆನಂದಬಾಬು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-35-991579561</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ‘ಈಡಿಗ ಸಮಾಜದ ಬೇಡಿಕೆಗಳ ಈಡೇರಿಕೆ ವಿಚಾರವಾಗಿ ಏ.4ರಂದು ಹಮ್ಮಿಕೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ನಿವಾಸದ ಮೇಲೆ ಮುತ್ತಿಗೆಯನ್ನು ಸದ್ಯ ಕೈ ಬಿಡಲಾಗಿದೆ’ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಡಿಗ ಸಮುದಾಯದ 18 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಲ ತಿಂಗಳ ಹಿಂದೆ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಆ ಸ್ಥಳಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಶಿವರಾಜ ತಂಗಡಗಿ ಮನವಿ ಸ್ವೀಕರಿಸಿ, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಸಚಿವರು ಭರವಸೆ ಈಡೇರಿಸದ ಕಾರಣ ಮನೆ ಮುತ್ತಿಗೆಗೆ ನಿರ್ಧಾರ ಕೈಗೊಳ್ಳಲಾಗಿತ್ತು’ ಎಂದರು.</p>.<p>‘ಇನ್ನೂ ನಮ್ಮದೇ ಸಮುದಾಯದ ಸಚಿವ ಮಧು ಬಂಗಾರಪ್ಪ ಸಮುದಾಯ ದ್ರೋಹಿ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಈಡಿಗ ಸಮಾಜಕ್ಕೆ ನಯಾಪೈಸೆ ಬಿಡುಗಡೆ ಆಗಿಲ್ಲ. ಈ ಬಗ್ಗೆ ಮಧು ಬಂಗಾರಪ್ಪನವರು ಪ್ರಶ್ನೆ ಮಾಡಲ್ಲ. ಸಿಎಂಗೆ ಭೇಟಿ ಮಾಡಿಸದಂತೆ ತಂಗಡಗಿ ಮೇಲೆ ಒತ್ತಡ ಹೇರಿ, ತಡೆಯುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ರಾಜ್ಯದಲ್ಲಿ ಮುಖ್ಯಮಂತ್ರಿ ಮಾಡುವ ಶಕ್ತಿ ಇದ್ದ ಈಡಿಗ ಸಮಾಜಕ್ಕೆ ಒಂದು ಮುಖ್ಯಮಂತ್ರಿ ಭೇಟಿ ಮಾಡುವ ಅವಕಾಶ ಸಿಗದಿರುವುದು ದುರಂತ. ಅಲ್ಲದೇ ನಾವು ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಕೆಲವರು ಬಿಜೆಪಿ ಘೋಷಿತ ಎನ್ನುತ್ತಿದ್ದಾರೆ. ಕಾಲವೇ ಮುಂದೆ ಉತ್ತರ ನೀಡಲಿದೆ’ ಎಂದರು.</p>.<p>ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷ ಕಾಶಿ ವಿಶ್ವನಾಥ, ಪರಮೇಶ, ಯರಡೋಣ ನಾಗಪ್ಪ, ವಿರೇಶ, ಹನುಮಂತರಾಯ, ಶಾಂತಪ್ಪ, ಅಂಬುಜಮ್ಮ, ಆನಂದಬಾಬು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-35-991579561</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>