ಸಿಂಧನೂರು: ತಾಲ್ಲೂಕಿನ ಆರ್.ಎಚ್.ಕ್ಯಾಂಪ್ ನಂ.2 ರಲ್ಲಿ ಜಮೀನೊಂದರಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಕೊಂಡಿದ್ದಾರೆ. ಈ ಸಂಬಂಧ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.
ಹನುಮೇಶ ಸರ್ಕಾರ (38) ಬಂಧಿತ ಆರೋಪಿ.
ಈತನು ತನ್ನ ಜಮೀನಿನಲ್ಲಿ ಬೆಳೆದಿದ್ದ ಸುಮಾರು ₹1,000 ಮೌಲ್ಯದ 1 ಕೆ.ಜಿ 140 ಗ್ರಾಂ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಿ.ಎಸ್.ರಾಘವೇಂದ್ರ ನೇತೃತ್ವದ ಸಿಬ್ಬಂದಿ ಚನ್ನಬಸವ, ದ್ಯಾಮಣ್ಣ, ಪರಶುರಾಮ, ಅಮರೇಶ ಹಾಗೂ ಶರಣಪ್ಪ ಅವರನ್ನು ಒಳಗೊಂಡ ತಂಡ ದಾಳಿ ನಡೆಸಿದೆ.