ಕೊರ್ತಕುಂದ ಏತ ನೀರಾವರಿ ಯೋಜನೆಯಲ್ಲಿ ಅಳವಡಿಸಿದ ವಿದ್ಯುತ್ ಪರಿವರ್ತಕ ಕೆಟ್ಟು ಹೋಗಿದೆ. ಅದನ್ನು ದುರಸ್ತಿಗೊಳಿಸಬೇಕು. ಬಿಸಿಯೂಟ ಕಟ್ಟಡದ ಅನುದಾನ ಮಂಜೂರು ಮಾಡಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ರುದ್ರಭೂಮಿ ಸಮಸ್ಯೆ, ಸಮುದಾಯ ಭವನ ದುರಸ್ತಿ, ಸಿಸಿರಸ್ತೆ , ಚರಂಡಿ ನಿರ್ಮಾಣ ಕುರಿತು ಗ್ರಾಮ ಪಂಚಾಯಿತಿ ಸದಸ್ಯರಾದ ಹನುಮಂತು ಕೊರ್ತಕುಂದ, ರಾಮಪ್ಪ ಸಗಮಕುಂಟ, ತಿಮ್ಮಪ್ಪ ಸಗಮಕುಂಟ ಅವರು ಸಭೆಯಲ್ಲಿ ಚರ್ಚಿಸಿದರು.