<p><strong>ಕವಿತಾಳ</strong>: ‘ನಿರಂತರ ವಿದ್ಯುತ್ ವ್ಯತ್ಯಯದಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತಿದೆ’ ಎಂದು ಆರೋಪಿಸಿದ ರೈತರು ಪಟ್ಟಣದ ಜೆಸ್ಕಾಂ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣ ಸೇರಿದಂತೆ ಸಮೀಪದ ಹುಸೇನಪುರ, ಕಡ್ಡೋಣಿ ತಿಮ್ಮಾಪುರ, ಸೈದಾಪುರ, ತೊಪ್ಪಲದೊಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಅವಧಿಯಲ್ಲಿ ನಿರಂತರ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕೃಷಿ ಚಟುವಟಿಕೆಗೆ ಸಮಸ್ಯೆ ಎದುರಾಗಿದೆ ಮತ್ತು ಪಂಪ್ಸೆಟ್, ಮೋಟರ್ಗಳು ಹಾಳಾಗುತ್ತಿವೆ ಎಂದು ರೈತರು ಆರೋಪಿಸಿದರು.</p>.<p>‘ವಾರಾಬಂದಿ ನಿಯಮದಂತೆ ಹಗಲು ಹಾಗೂ ರಾತ್ರಿ ವೇಳೆ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು ಈ ಅವಧಿಯಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡುವ ಮೂಲಕ ತೊಂದರೆ ನೀಡಲಾಗುತ್ತಿದೆ. ರೈತರು ಕೆಲಸ ಮಾಡುವುದನ್ನು ಬಿಟ್ಟು ವಿದ್ಯುತ್ಗಾಗಿ ಕಾಯುವಂತಾಗಿದೆ. ಕಾರ್ಮಿಕರಿಗೆ ಕೆಲಸವಿಲ್ಲದೆ ಕೂಲಿ ನೀಡುವ ಪ್ರಮೇಯ ಎದುರಾಗಿದೆ’ ಎಂದು ರೈತರಾದ ರಫಿ ಒಂಟಿಬಂಡಿ, ಮೌನೇಶ ನಾಯಕ, ಮೌಲಾಲಿ, ನಿಂಗಪ್ಪ, ಅಮರೇಶ, ಹಾಜೀಬಾಬಾ,ನಿಂಗಪ್ಪ, ಸಣ್ಣಪ್ಪ ಮತ್ತು ಮುಕ್ತಾರ್ ಪಾಶಾ ಮತ್ತಿತರರು ಆರೋಪಿಸಿದರು.</p>.<p>‘ದುರಸ್ತಿ ನೆಪದಲ್ಲಿ ಎಲ್ಲಾ ಕಡೆ ವಿದ್ಯುತ್ ಸ್ಥಗಿತ ಮಾಡುವ ಬದಲಿಗೆ ಆಯಾ ಪ್ರದೇಶದಲ್ಲಿ ಕಡಿತ ಮಾಡಿ ದುರಸ್ತಿ ಕಾರ್ಯ ಮಾಡಬೇಕು. ದೂರದ ಹೂಡಾ ಗ್ರಾಮದಲ್ಲಿ ದುರಸ್ತಿ ಇದೆ ಎಂದು ಹೇಳಿ ಕವಿತಾಳ ಸೇರಿದಂತೆ ಬಹುತೇಕ ಹಳ್ಳಿಗಳ ವ್ಯಾಪ್ತಿಯಲ್ಲಿ ಕಡಿತ ಮಾಡಲಾಗುತ್ತದೆ’ ಎಂದು ರೈತ ಮೌನೇಶ ಹಿರೇಕುರಬರ ಹೇಳಿದರು.</p>.<p>ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಸರಿಪಡಿಸಲಾಗುವುದು ಎಂದು ಜೆಸ್ಕಾಂ ಶಾಖಾಧಿಕಾರಿ ಜಲಾಲ್ ಸಾಬ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ‘ನಿರಂತರ ವಿದ್ಯುತ್ ವ್ಯತ್ಯಯದಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತಿದೆ’ ಎಂದು ಆರೋಪಿಸಿದ ರೈತರು ಪಟ್ಟಣದ ಜೆಸ್ಕಾಂ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣ ಸೇರಿದಂತೆ ಸಮೀಪದ ಹುಸೇನಪುರ, ಕಡ್ಡೋಣಿ ತಿಮ್ಮಾಪುರ, ಸೈದಾಪುರ, ತೊಪ್ಪಲದೊಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಅವಧಿಯಲ್ಲಿ ನಿರಂತರ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕೃಷಿ ಚಟುವಟಿಕೆಗೆ ಸಮಸ್ಯೆ ಎದುರಾಗಿದೆ ಮತ್ತು ಪಂಪ್ಸೆಟ್, ಮೋಟರ್ಗಳು ಹಾಳಾಗುತ್ತಿವೆ ಎಂದು ರೈತರು ಆರೋಪಿಸಿದರು.</p>.<p>‘ವಾರಾಬಂದಿ ನಿಯಮದಂತೆ ಹಗಲು ಹಾಗೂ ರಾತ್ರಿ ವೇಳೆ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು ಈ ಅವಧಿಯಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡುವ ಮೂಲಕ ತೊಂದರೆ ನೀಡಲಾಗುತ್ತಿದೆ. ರೈತರು ಕೆಲಸ ಮಾಡುವುದನ್ನು ಬಿಟ್ಟು ವಿದ್ಯುತ್ಗಾಗಿ ಕಾಯುವಂತಾಗಿದೆ. ಕಾರ್ಮಿಕರಿಗೆ ಕೆಲಸವಿಲ್ಲದೆ ಕೂಲಿ ನೀಡುವ ಪ್ರಮೇಯ ಎದುರಾಗಿದೆ’ ಎಂದು ರೈತರಾದ ರಫಿ ಒಂಟಿಬಂಡಿ, ಮೌನೇಶ ನಾಯಕ, ಮೌಲಾಲಿ, ನಿಂಗಪ್ಪ, ಅಮರೇಶ, ಹಾಜೀಬಾಬಾ,ನಿಂಗಪ್ಪ, ಸಣ್ಣಪ್ಪ ಮತ್ತು ಮುಕ್ತಾರ್ ಪಾಶಾ ಮತ್ತಿತರರು ಆರೋಪಿಸಿದರು.</p>.<p>‘ದುರಸ್ತಿ ನೆಪದಲ್ಲಿ ಎಲ್ಲಾ ಕಡೆ ವಿದ್ಯುತ್ ಸ್ಥಗಿತ ಮಾಡುವ ಬದಲಿಗೆ ಆಯಾ ಪ್ರದೇಶದಲ್ಲಿ ಕಡಿತ ಮಾಡಿ ದುರಸ್ತಿ ಕಾರ್ಯ ಮಾಡಬೇಕು. ದೂರದ ಹೂಡಾ ಗ್ರಾಮದಲ್ಲಿ ದುರಸ್ತಿ ಇದೆ ಎಂದು ಹೇಳಿ ಕವಿತಾಳ ಸೇರಿದಂತೆ ಬಹುತೇಕ ಹಳ್ಳಿಗಳ ವ್ಯಾಪ್ತಿಯಲ್ಲಿ ಕಡಿತ ಮಾಡಲಾಗುತ್ತದೆ’ ಎಂದು ರೈತ ಮೌನೇಶ ಹಿರೇಕುರಬರ ಹೇಳಿದರು.</p>.<p>ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಸರಿಪಡಿಸಲಾಗುವುದು ಎಂದು ಜೆಸ್ಕಾಂ ಶಾಖಾಧಿಕಾರಿ ಜಲಾಲ್ ಸಾಬ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>