ರಾಯಚೂರು: ಬೀದಿನಾಯಿಗಳ ದಾಳಿಗೆ ಒಳಗಾಗಿದ್ದ ರಾಯಚೂರು ತಾಲ್ಲೂಕಿನ ಕೊರ್ವಿಹಾಳ ಗ್ರಾಮದ 4 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ಕೆಲ ದಿನಗಳ ಹಿಂದೆ ಕೊರ್ವಿಹಾಳ ಗ್ರಾಮದಲ್ಲಿ ಬಾಲಕಿ ಲಾವಣ್ಯ ಬೀದಿ ನಾಯಿ ದಾಳಿಗೆ ಒಳಗಾಗಿ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಳು ಆದರೆ ಶನಿವಾರ ಏಕಾಏಕಿ ಮೃತಪಟ್ಟಿದ್ದಾಳೆ.
ಮನೆಯ ಮುಂದೆ ಆಟವಾಡುತ್ತಿದ್ದ 7 ಮಕ್ಕಳ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಎಲ್ಲಾ ಮಕ್ಕಳು ಬಿಡುಗಡೆಯಾಗಿದ್ದರು. ಲಾವಣ್ಯ ಸಾವಿನಿಂದ ನಾಯಿ ದಾಳಿಗೆ ಒಳಗಾದ ಉಳಿದ ಮಕ್ಕಳ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.