<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ಯಳಗುಂದಿ ಗ್ರಾಮದ ಬಳಿಯ ಕರಕಲಗಡ್ಡಿಯಲ್ಲಿ 11 ವರ್ಷದ ಬಾಲಕಿ ಅನಿತಾ ಜ್ವರದಿಂದ ಬಳಲುತ್ತಿದ್ದು, ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಯನ್ನು ದಾಟಲಾಗದೆ ಬಾಲಕಿಯ ಕುಟುಂಬಸ್ಥರು ಔಷಧಕ್ಕಾಗಿ ಪರದಾಡುತ್ತಿದ್ದಾರೆ. </p>.<p>ಬಸವಸಾಗರ ಜಲಾಶಯದಿಂದ ಸೋಮವಾರ 1.06 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ಬಾಲಕಿಯ ಕುಟುಂಬದವರಿಗೆ ತೆಪ್ಪದಲ್ಲಿ ನದಿ ದಾಟಲು ಸಾಧ್ಯವಾಗುತ್ತಿಲ್ಲ. ಬಾಲಕಿಗೆ ಔಷಧ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ ಭರವಸೆ ನೀಡಿದ್ದಾರೆ.</p>.<p>ಕರಕಲಗಡ್ಡಿಯಲ್ಲಿ ಏಳು ಜನ ಉಳಿದುಕೊಂಡಿದ್ದಾರೆ. 25 ದಿನಗಳ ಹಿಂದೆ ಲಿಂಗಸುಗೂರಿಗೆ ಬಂದು ದಿನಸಿ ಸಾಮಗ್ರಿಗಳನ್ನು ಖರೀದಿಸಿಕೊಂಡು ಹೋಗಿದ್ದಾರೆ. ಈಗ ದಿನಸಿಯೂ ಖಾಲಿಯಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ಯಳಗುಂದಿ ಗ್ರಾಮದ ಬಳಿಯ ಕರಕಲಗಡ್ಡಿಯಲ್ಲಿ 11 ವರ್ಷದ ಬಾಲಕಿ ಅನಿತಾ ಜ್ವರದಿಂದ ಬಳಲುತ್ತಿದ್ದು, ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಯನ್ನು ದಾಟಲಾಗದೆ ಬಾಲಕಿಯ ಕುಟುಂಬಸ್ಥರು ಔಷಧಕ್ಕಾಗಿ ಪರದಾಡುತ್ತಿದ್ದಾರೆ. </p>.<p>ಬಸವಸಾಗರ ಜಲಾಶಯದಿಂದ ಸೋಮವಾರ 1.06 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ಬಾಲಕಿಯ ಕುಟುಂಬದವರಿಗೆ ತೆಪ್ಪದಲ್ಲಿ ನದಿ ದಾಟಲು ಸಾಧ್ಯವಾಗುತ್ತಿಲ್ಲ. ಬಾಲಕಿಗೆ ಔಷಧ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ ಭರವಸೆ ನೀಡಿದ್ದಾರೆ.</p>.<p>ಕರಕಲಗಡ್ಡಿಯಲ್ಲಿ ಏಳು ಜನ ಉಳಿದುಕೊಂಡಿದ್ದಾರೆ. 25 ದಿನಗಳ ಹಿಂದೆ ಲಿಂಗಸುಗೂರಿಗೆ ಬಂದು ದಿನಸಿ ಸಾಮಗ್ರಿಗಳನ್ನು ಖರೀದಿಸಿಕೊಂಡು ಹೋಗಿದ್ದಾರೆ. ಈಗ ದಿನಸಿಯೂ ಖಾಲಿಯಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>