ಬುಧವಾರ ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್ ಅವರಿಗೆ ಮನವಿ ಸಲ್ಲಿಸಿ, ರಾಯಚೂರು ಸ್ನಾತಕೋತ್ತರ ಕೇಂದ್ರ ಮೇಲ್ದರ್ಜೇರಿಸಿ ವಿಶ್ವವಿದ್ಯಾಲಯ ಎಂದು ಘೋಷಿಸಿದ್ದು ಇಂದಿಗೂ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಅಡಿಟೋರಿಯಮ್, ಈ ಭಾಗದ ಮಕ್ಕಳ ಭವಿಷ್ಯ ರೂಪಿಸುವ ವೈವಿಧ್ಯಮಯ ಕೋರ್ಸ್ಗಳ ಆರಂಭ, ಅನುಭವಿ ಉಪನ್ಯಾಸಕರ ನೇಮಕಾತಿ ಮಾಡದೆ ಹೋಗಿದ್ದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಗಮನ ಸೆಳೆದರು.