<p><strong>ರಾಯಚೂರು: </strong>ಚುನಾವಣೆ ಸಂದರ್ಭದಲ್ಲಿ ಸೀರೆ, ಟಿವಿ, ಮಿಕ್ಸಿ ಹಾಗೂ ಮದ್ಯ ಸೇರಿದಂತೆ ಯಾವುದೇ ಆಮಿಷಗಳಿಗೂ ಮತದಾರರು ಬಲಿಯಾಗದೆ ನೈತಿಕತೆಯಿಂದ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಶರತ್ ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಶ್ರೇಷ್ಠ ಹಾಗೂ ಪವಿತ್ರವಾದ ಮತದಾನದ ಹಕ್ಕನ್ನು ಅಪವಿತ್ರಗೊಳಿಸಬಾರದು. ಅಪವಿತ್ರಗೊಳಿಸಿದರೆ ನೈತಿಕತೆ ಕಳೆದುಕೊಳ್ಳಬೇಕಾಗುತ್ತದೆ. ಪ್ರಜಾಪ್ರಭುತ್ವದ ಬೇರು ಗಟ್ಟಿಯಾಗಲು, ದೇಶದಲ್ಲಿ ಬದಲಾವಣೆಗೆ ಹಾಗೂ ಸದೃಢ ದೇಶ ಕಟ್ಟಲು ಮತದಾನ ಮಾಡಬೇಕು ಎಂದರು.</p>.<p>18 ವರ್ಷ ತುಂಬಿದ ದೇಶದ ಪ್ರತಿಯೊಬ್ಬ ನಾಗರಿಕರಿಗೆ ಯಾವುದೇ ತಾರತಮ್ಯಗಳಿಲ್ಲದೇ ಮತದಾನ ಹಕ್ಕನ್ನು ಸಂವಿಧಾನ ನೀಡಿದೆ. ಆದರೆ, ಇಂದಿಗೂ ಜನರು ಮತದಾನದ ಹಕ್ಕಿನ ಮಹತ್ವ ಅರಿತುಕೊಂಡಿಲ್ಲ ಎಂದು ತಿಳಿಸಿದರು.</p>.<p>ಕಳೆದ ಲೋಕಸಭೆ ಚುನಾವಣೆಯಲ್ಲಿ ಕೇವಲ ಒಂದೇ ಮತದಿಂದ ಅಭ್ಯರ್ಥಿ ಗೆದ್ದಿರುವ ನಿದರ್ಶನವಿದೆ. ನಗರ ಪ್ರದೇಶದಗಳ ಜನರದಲ್ಲಿ ಮತದಾನದ ಬಗ್ಗೆ ತಾತ್ಸಾರ ಮನೋಭಾವವಿದ್ದು, ಆದ್ದರಿಂದ ತಾತ್ಸಾರ ತೋರದೆ ಮತ ಚಲಾಯಿಸಬೇಕು ಎಂದರು.</p>.<p>ಮತದಾನದ ದಿನದಂದು ಮತಪಟ್ಟಿಯಲ್ಲಿ ಹೆಸರು ಹುಡುಕಿಕೊಂಡು ಮತ ಚಲಾಯಿಸುವುದನ್ನು ಮಾಡಬಾರದು. ಮುಂಚಿತವಾಗಿ ಮತ ಎಲ್ಲಿ ಚಲಾಯಿಸಬೇಕು. ಮತಪಟ್ಟಿಯಲ್ಲಿ ಹೆಸರು ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಉದ್ಘಾಟಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಮಾತನಾಡಿ, ಒಳ್ಳೆಯ ಸಮಾಜ ನಿರ್ಮಾಣ ಮಾಡಲು ಒಳ್ಳೆಯ ಮಾರ್ಗವೆಂದರೆ ಮತ ಚಲಾಯಿಸುವುದಾಗಿದೆ. ಪ್ರತಿಯೊಬ್ಬರೂ ಮತ ಚಲಾಯಿಸುವ ಮೂಲಕ ಒಳ್ಳೆಯ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>ಸ್ವಾತಂತ್ರ್ಯ ಪೂರ್ವದಲ್ಲಿ ಮತ ಚಲಾಯಿಸುವ ಹಕ್ಕು ಎಲ್ಲರಿಗೂ ಇರಲಿಲ್ಲ. ಸ್ವಾತಂತ್ರ್ಯದ ನಂತರ ಸಂವಿಧಾನದ ಮೂಲಕ ಯಾವುದೇ ತಾರತಮ್ಯವಿಲ್ಲದೇ ಎಲ್ಲರಿಗೂ ಮತದಾನದ ಹಕ್ಕು ನೀಡಲಾಗಿದೆ. ಈ ಹಕ್ಕಿನ ಮಹತ್ವ ಅರಿತುಕೊಂಡು ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಪ್ರತಿಜ್ಞಾವಿಧಿ ಬೋಧಿಸಿದರು. ರಾಷ್ಟ್ರೀಯ ಮತದಾರರ ದಿನದ ನಿಮಿತ್ತ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಇದೇ ವೇಳೆ ಹೊಸ ಮತದಾರರಿಗೆ ಗುರುತಿನ ಚೀಟಿ ವಿತರಣೆ ಮಾಡಲಾಯಿತು.</p>.<p>ಉಪ ವಿಭಾಗಾಧಿಕಾರಿ ಶಿಲ್ಪಾಶರ್ಮ, ತಹಸೀಲ್ದಾರ ಹಂಪಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ, ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರಿ ಉಪನಿರ್ದೇಶಕ ಸಿ.ಟಿ.ಕಲ್ಲಯ್ಯ ಇದ್ದರು.</p>.<p>ಜಾಥಾ: ರಾಷ್ಟ್ರೀಯ ಮತದಾರರ ದಿನದ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಯಿಂದ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಚುನಾವಣೆ ಸಂದರ್ಭದಲ್ಲಿ ಸೀರೆ, ಟಿವಿ, ಮಿಕ್ಸಿ ಹಾಗೂ ಮದ್ಯ ಸೇರಿದಂತೆ ಯಾವುದೇ ಆಮಿಷಗಳಿಗೂ ಮತದಾರರು ಬಲಿಯಾಗದೆ ನೈತಿಕತೆಯಿಂದ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಶರತ್ ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಶ್ರೇಷ್ಠ ಹಾಗೂ ಪವಿತ್ರವಾದ ಮತದಾನದ ಹಕ್ಕನ್ನು ಅಪವಿತ್ರಗೊಳಿಸಬಾರದು. ಅಪವಿತ್ರಗೊಳಿಸಿದರೆ ನೈತಿಕತೆ ಕಳೆದುಕೊಳ್ಳಬೇಕಾಗುತ್ತದೆ. ಪ್ರಜಾಪ್ರಭುತ್ವದ ಬೇರು ಗಟ್ಟಿಯಾಗಲು, ದೇಶದಲ್ಲಿ ಬದಲಾವಣೆಗೆ ಹಾಗೂ ಸದೃಢ ದೇಶ ಕಟ್ಟಲು ಮತದಾನ ಮಾಡಬೇಕು ಎಂದರು.</p>.<p>18 ವರ್ಷ ತುಂಬಿದ ದೇಶದ ಪ್ರತಿಯೊಬ್ಬ ನಾಗರಿಕರಿಗೆ ಯಾವುದೇ ತಾರತಮ್ಯಗಳಿಲ್ಲದೇ ಮತದಾನ ಹಕ್ಕನ್ನು ಸಂವಿಧಾನ ನೀಡಿದೆ. ಆದರೆ, ಇಂದಿಗೂ ಜನರು ಮತದಾನದ ಹಕ್ಕಿನ ಮಹತ್ವ ಅರಿತುಕೊಂಡಿಲ್ಲ ಎಂದು ತಿಳಿಸಿದರು.</p>.<p>ಕಳೆದ ಲೋಕಸಭೆ ಚುನಾವಣೆಯಲ್ಲಿ ಕೇವಲ ಒಂದೇ ಮತದಿಂದ ಅಭ್ಯರ್ಥಿ ಗೆದ್ದಿರುವ ನಿದರ್ಶನವಿದೆ. ನಗರ ಪ್ರದೇಶದಗಳ ಜನರದಲ್ಲಿ ಮತದಾನದ ಬಗ್ಗೆ ತಾತ್ಸಾರ ಮನೋಭಾವವಿದ್ದು, ಆದ್ದರಿಂದ ತಾತ್ಸಾರ ತೋರದೆ ಮತ ಚಲಾಯಿಸಬೇಕು ಎಂದರು.</p>.<p>ಮತದಾನದ ದಿನದಂದು ಮತಪಟ್ಟಿಯಲ್ಲಿ ಹೆಸರು ಹುಡುಕಿಕೊಂಡು ಮತ ಚಲಾಯಿಸುವುದನ್ನು ಮಾಡಬಾರದು. ಮುಂಚಿತವಾಗಿ ಮತ ಎಲ್ಲಿ ಚಲಾಯಿಸಬೇಕು. ಮತಪಟ್ಟಿಯಲ್ಲಿ ಹೆಸರು ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಉದ್ಘಾಟಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಮಾತನಾಡಿ, ಒಳ್ಳೆಯ ಸಮಾಜ ನಿರ್ಮಾಣ ಮಾಡಲು ಒಳ್ಳೆಯ ಮಾರ್ಗವೆಂದರೆ ಮತ ಚಲಾಯಿಸುವುದಾಗಿದೆ. ಪ್ರತಿಯೊಬ್ಬರೂ ಮತ ಚಲಾಯಿಸುವ ಮೂಲಕ ಒಳ್ಳೆಯ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>ಸ್ವಾತಂತ್ರ್ಯ ಪೂರ್ವದಲ್ಲಿ ಮತ ಚಲಾಯಿಸುವ ಹಕ್ಕು ಎಲ್ಲರಿಗೂ ಇರಲಿಲ್ಲ. ಸ್ವಾತಂತ್ರ್ಯದ ನಂತರ ಸಂವಿಧಾನದ ಮೂಲಕ ಯಾವುದೇ ತಾರತಮ್ಯವಿಲ್ಲದೇ ಎಲ್ಲರಿಗೂ ಮತದಾನದ ಹಕ್ಕು ನೀಡಲಾಗಿದೆ. ಈ ಹಕ್ಕಿನ ಮಹತ್ವ ಅರಿತುಕೊಂಡು ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಪ್ರತಿಜ್ಞಾವಿಧಿ ಬೋಧಿಸಿದರು. ರಾಷ್ಟ್ರೀಯ ಮತದಾರರ ದಿನದ ನಿಮಿತ್ತ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಇದೇ ವೇಳೆ ಹೊಸ ಮತದಾರರಿಗೆ ಗುರುತಿನ ಚೀಟಿ ವಿತರಣೆ ಮಾಡಲಾಯಿತು.</p>.<p>ಉಪ ವಿಭಾಗಾಧಿಕಾರಿ ಶಿಲ್ಪಾಶರ್ಮ, ತಹಸೀಲ್ದಾರ ಹಂಪಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ, ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರಿ ಉಪನಿರ್ದೇಶಕ ಸಿ.ಟಿ.ಕಲ್ಲಯ್ಯ ಇದ್ದರು.</p>.<p>ಜಾಥಾ: ರಾಷ್ಟ್ರೀಯ ಮತದಾರರ ದಿನದ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಯಿಂದ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>