ರಾಯಚೂರು: ನಗರದ ಮಹಾತ್ಮ ಗಾಂಧಿವೃತ್ತದ ಆಂಜನೇಯ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಸೋಮವಾರ ಭೇಟಿ ನೀಡಿ ದರ್ಶನ ಪಡೆದರು.
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುವ ಪೂರ್ವದಲ್ಲಿ ದೇವಸ್ಥಾನಕ್ಕೆ ಆಗಮಿಸಿದರು.
ದೇವಸ್ಥಾನದ ಅರ್ಚಕರು ಮಂಗಳವಾದ್ಯದೊಂದಿಗೆ ಅವರನ್ನು ಸ್ವಾಗತಿಸಿ, ಶಾಲು ಹೊದಿಸಿ ಗೌರವಿಸಿದರು. ಆಂಜನೇಯ ಸ್ವಾಮಿಗೆ ಆರತಿ ಬೆಳಗಿದ ರಾಜ್ಯಪಾಲರು, ಆಂಜನೇಯ ಸ್ವಾಮಿ ದರ್ಶನ ಪಡೆದು ತೆರಳಿದರು. ಅರ್ಚಕರಾದ ಹನುಮೇಶ ಆಚಾರ್ ಹಾಗೂ ಪವನ್ಆಚಾರ್ ಅವರು ಇದ್ದರು.